ಒಂದೇ ದಿನ ನಾಲ್ಕು ದೇವಾಲಯಗಳಲ್ಲಿ ಕಳ್ಳತನ: 11 ರುಪಾಯಿ ದಕ್ಷಿಣೆ ಇಟ್ಟು ದೇವಾಲಯಗಳಲ್ಲಿ ಕಳ್ಳತನ: ಕಳ್ಳರ ಕೈಚಳಕಕ್ಕೆ ಗ್ರಾಮಸ್ಥರು ಫುಲ್ ಶಾಕ್

ಹೊಸಕೋಟೆ: ಒಂದೇ ದಿನ ನಾಲ್ಕು ದೇವಾಲಯಗಳಲ್ಲಿ ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ಪಟಾಲಮ್ಮ, ಮುತ್ಯಾಲಮ್ಮ, ಗಂಗಮ್ಮ ಮತ್ತು ಓಂ ಶಕ್ತಿ ದೇವಾಲಯದಲ್ಲಿ ಕಳ್ಳತನವಾಗಿದೆ. ಕಳ್ಳರ ಕೈಚಳಕಕ್ಕೆ ಗ್ರಾಮಸ್ಥರು ಶಾಕ್ ಆಗಿದ್ದಾರೆ.

ಕಳ್ಳರು 11 ರುಪಾಯಿ ದಕ್ಷಿಣೆ ಇಟ್ಟು ದೇವಾಲಯದಲ್ಲಿ ಕಳ್ಳತನ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ದೇವರ ಕೊರಳಲ್ಲಿದ್ದ 6 ತಾಳಿ ಕಳ್ಳತನ ಮಾಡಲಾಗಿದೆ. ಲಕ್ಷಾಂತರ ರುಪಾಯಿ ಬೆಲೆ ಬಾಳುವ ಚಿನ್ನವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

2 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

16 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

17 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

19 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

23 hours ago