Categories: ತುಮಕೂರು

ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ

ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಏಳು ಮಂದಿ ಮಹಿಳೆಯರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು.

ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಶಸ್ತ್ರಚಿಕಿತ್ಸೆಗೆ ಮೂವರು ಮಹಿಳೆಯರು ಒಳಗಾಗಿದ್ದರು.

ಫೆ.22ರಂದು 7 ಮಂದಿ ಮಹಿಳೆಯರಿಗೆ ಹೆರಿಗೆ ಸೇರಿದಂತೆ ವಿವಿಧ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

30 ವರ್ಷದ ಅನಿತಾ ಅವರು ಸಂತಾನಹರಣ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದಾರೆ. ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು.‌ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ.24ರಂದು ಸಾವನ್ನಪ್ಪಿದ್ದಾರೆ.

ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ನರಸಮ್ಮ ಅವರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ.25ರಂದು ನರಸಮ್ಮ ಅಸುನೀಗಿದ್ದಾರೆ.

ಈ ಮೂವರು ಫೆ.22ರಂದು ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಮೂವರು ಸಾವಿಗೆ ನ್ಯಾಯ ಒದಗಿಸುವಂತೆ ಅಂಜಲಿ ಕುಟುಂಬಸ್ಥರಿಂದ ಪಾವಗಡದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Share
Published by
Ramesh Babu

Recent Posts

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

4 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

15 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

17 hours ago

ಸಚಿವ ಕೆ.ಎಚ್.ಮುನಿಯಪ್ಪವರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ- ಯೂತ್ ಕಾಂಗ್ರೆಸ್ ಸ್ಪಷ್ಟನೆ

ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…

17 hours ago

ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…

23 hours ago

ಮರ ಬಿದ್ದು ಗರ್ಭಿಣಿ ಮತ್ತು ವಿದ್ಯಾರ್ಥಿನಿ ಸಾವು

ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ…

1 day ago