Categories: ತುಮಕೂರು

ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ

ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಏಳು ಮಂದಿ ಮಹಿಳೆಯರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು.

ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಶಸ್ತ್ರಚಿಕಿತ್ಸೆಗೆ ಮೂವರು ಮಹಿಳೆಯರು ಒಳಗಾಗಿದ್ದರು.

ಫೆ.22ರಂದು 7 ಮಂದಿ ಮಹಿಳೆಯರಿಗೆ ಹೆರಿಗೆ ಸೇರಿದಂತೆ ವಿವಿಧ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

30 ವರ್ಷದ ಅನಿತಾ ಅವರು ಸಂತಾನಹರಣ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದಾರೆ. ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು.‌ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ.24ರಂದು ಸಾವನ್ನಪ್ಪಿದ್ದಾರೆ.

ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ನರಸಮ್ಮ ಅವರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ.25ರಂದು ನರಸಮ್ಮ ಅಸುನೀಗಿದ್ದಾರೆ.

ಈ ಮೂವರು ಫೆ.22ರಂದು ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಮೂವರು ಸಾವಿಗೆ ನ್ಯಾಯ ಒದಗಿಸುವಂತೆ ಅಂಜಲಿ ಕುಟುಂಬಸ್ಥರಿಂದ ಪಾವಗಡದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

46 minutes ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

50 minutes ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 hour ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

4 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

10 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

12 hours ago