ಒಂದೇ ಭೂಮಿಯ ದಾಖಲೆಯನ್ನು ನಕಲು ಮಾಡಿ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಪ್ರಕರಣದಲ್ಲಿ ಆರು ಜನರನ್ನು ಜಯನಗರ ಪೊಲೀಸರು ಬಂಧಿಸಲಾಗಿದೆ. ಹೆಚ್ಚುವರಿ ತನಿಖೆಯಿಂದಾಗಿ ಈ ಬಂಧಿತರು 22 ಬ್ಯಾಂಕುಗಳಿಂಗ 10 ಕೋಟಿಯ ಕಂತು ಸಾಲ ಮತ್ತು ಯಂತ್ರೋಪಕರಣ ಸಾಲ ಪಡೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಜಯನಗರ ಪೊಲೀಸರು ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಳೆಯ ತಾಮ್ರದ ಪಾತ್ರೆ ಹಾಗೂ 69,79,000 ಲಕ್ಷ ನಗದು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದರು.
ಹಲವು ಅಪರಾಧಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಐವರು ರೌಡಿಗಳನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.
ಸರಗಳ್ಳತನ ಹಾಗೂ ಕಳ್ಳತನ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ಪುಟ್ಟೇನಹಳ್ಳಿ ಪೊಲೀಸರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮಾ.19ರಂದು ಬಾಗಲಗುಂಟೆ ಹಾಗೂ ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಬಳಿಯಿಂದ 1.80 ಲಕ್ಷ ಮೌಲ್ಯದ ಕಳುವಾದ ವಸ್ತುಗಳು ಸಿಕ್ಕಿವೆ ಎಂದು ತಿಳಿಸಿದರು.
ಏ.14ರಂದು ಪುಟ್ಟೇನಹಳ್ಳಿಯಲ್ಲಿ ನಡೆದ ಮತ್ತೊಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದು, ಇವರಿಂದ 2 ಚಿನ್ನದ ಸರ, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು 4.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏ.01ರಂದು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಬಂಧನವಾಗಿದ್ದು, ಈತನಿಂದ 4.75 ಲಕ್ಷ ಮೌಲ್ಯದ 17 ಗ್ರಾಂ ಚಿನ್ನದ ಬಿಸ್ಕೆಟ್, 54 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…