ಒಂದೇ ಭೂಮಿಯ ದಾಖಲೆಯನ್ನು ನಕಲು ಮಾಡಿ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಪ್ರಕರಣದಲ್ಲಿ ಆರು ಜನರನ್ನು ಜಯನಗರ ಪೊಲೀಸರು ಬಂಧಿಸಲಾಗಿದೆ. ಹೆಚ್ಚುವರಿ ತನಿಖೆಯಿಂದಾಗಿ ಈ ಬಂಧಿತರು 22 ಬ್ಯಾಂಕುಗಳಿಂಗ 10 ಕೋಟಿಯ ಕಂತು ಸಾಲ ಮತ್ತು ಯಂತ್ರೋಪಕರಣ ಸಾಲ ಪಡೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಜಯನಗರ ಪೊಲೀಸರು ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಳೆಯ ತಾಮ್ರದ ಪಾತ್ರೆ ಹಾಗೂ 69,79,000 ಲಕ್ಷ ನಗದು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದರು.
ಹಲವು ಅಪರಾಧಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಐವರು ರೌಡಿಗಳನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.
ಸರಗಳ್ಳತನ ಹಾಗೂ ಕಳ್ಳತನ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ಪುಟ್ಟೇನಹಳ್ಳಿ ಪೊಲೀಸರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮಾ.19ರಂದು ಬಾಗಲಗುಂಟೆ ಹಾಗೂ ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಬಳಿಯಿಂದ 1.80 ಲಕ್ಷ ಮೌಲ್ಯದ ಕಳುವಾದ ವಸ್ತುಗಳು ಸಿಕ್ಕಿವೆ ಎಂದು ತಿಳಿಸಿದರು.
ಏ.14ರಂದು ಪುಟ್ಟೇನಹಳ್ಳಿಯಲ್ಲಿ ನಡೆದ ಮತ್ತೊಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದು, ಇವರಿಂದ 2 ಚಿನ್ನದ ಸರ, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು 4.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏ.01ರಂದು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಬಂಧನವಾಗಿದ್ದು, ಈತನಿಂದ 4.75 ಲಕ್ಷ ಮೌಲ್ಯದ 17 ಗ್ರಾಂ ಚಿನ್ನದ ಬಿಸ್ಕೆಟ್, 54 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…