ಒಂದೇ ಭೂಮಿಯ ದಾಖಲೆ ನಕಲು: ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಖದೀಮರು: ಸದ್ಯ 6 ಆರೋಪಿಗಳ ಬಂಧನ

ಒಂದೇ ಭೂಮಿಯ ದಾಖಲೆಯನ್ನು ನಕಲು ಮಾಡಿ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಪ್ರಕರಣದಲ್ಲಿ ಆರು ಜನರನ್ನು ಜಯನಗರ ಪೊಲೀಸರು ಬಂಧಿಸಲಾಗಿದೆ. ಹೆಚ್ಚುವರಿ ತನಿಖೆಯಿಂದಾಗಿ ಈ ಬಂಧಿತರು 22 ಬ್ಯಾಂಕುಗಳಿಂಗ 10 ಕೋಟಿಯ ಕಂತು ಸಾಲ ಮತ್ತು ಯಂತ್ರೋಪಕರಣ ಸಾಲ ಪಡೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ‌ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

ಜಯನಗರ ಪೊಲೀಸರು ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಳೆಯ ತಾಮ್ರದ ಪಾತ್ರೆ ಹಾಗೂ 69,79,000 ಲಕ್ಷ ನಗದು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದರು.

ಹಲವು ಅಪರಾಧಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಐವರು ರೌಡಿಗಳನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಸಿದ್ದಾಪುರ ಪೊಲೀಸರು ಕಳೆದ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನನ್ನು 2011ರಲ್ಲಿ ನ್ಯಾಯಾಲಯ ಹೊರಡಿಸಿದ್ದ ವಾರೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಹೆಚ್ಚಿನ ತನಿಖೆಯಿಂದಾಗಿ ಬಂಧಿತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 16 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿರುತ್ತದೆ ಎಂದರು.

ಸರಗಳ್ಳತನ ಹಾಗೂ ಕಳ್ಳತನ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ಪುಟ್ಟೇನಹಳ್ಳಿ ಪೊಲೀಸರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮಾ.19ರಂದು ಬಾಗಲಗುಂಟೆ ಹಾಗೂ ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಬಳಿಯಿಂದ 1.80 ಲಕ್ಷ ಮೌಲ್ಯದ ಕಳುವಾದ  ವಸ್ತುಗಳು ಸಿಕ್ಕಿವೆ ಎಂದು ತಿಳಿಸಿದರು.

ಏ.14ರಂದು ಪುಟ್ಟೇನಹಳ್ಳಿಯಲ್ಲಿ ನಡೆದ ಮತ್ತೊಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದು, ಇವರಿಂದ 2 ಚಿನ್ನದ ಸರ, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು 4.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏ.01ರಂದು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಬಂಧನವಾಗಿದ್ದು, ಈತನಿಂದ 4.75 ಲಕ್ಷ ಮೌಲ್ಯದ 17 ಗ್ರಾಂ ಚಿನ್ನದ ಬಿಸ್ಕೆಟ್, 54 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

41 minutes ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

7 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

8 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago