ಒಂದೇ ಭೂಮಿಯ ದಾಖಲೆಯನ್ನು ನಕಲು ಮಾಡಿ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಪ್ರಕರಣದಲ್ಲಿ ಆರು ಜನರನ್ನು ಜಯನಗರ ಪೊಲೀಸರು ಬಂಧಿಸಲಾಗಿದೆ. ಹೆಚ್ಚುವರಿ ತನಿಖೆಯಿಂದಾಗಿ ಈ ಬಂಧಿತರು 22 ಬ್ಯಾಂಕುಗಳಿಂಗ 10 ಕೋಟಿಯ ಕಂತು ಸಾಲ ಮತ್ತು ಯಂತ್ರೋಪಕರಣ ಸಾಲ ಪಡೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಜಯನಗರ ಪೊಲೀಸರು ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಳೆಯ ತಾಮ್ರದ ಪಾತ್ರೆ ಹಾಗೂ 69,79,000 ಲಕ್ಷ ನಗದು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದರು.
ಹಲವು ಅಪರಾಧಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಐವರು ರೌಡಿಗಳನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.
ಸರಗಳ್ಳತನ ಹಾಗೂ ಕಳ್ಳತನ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ಪುಟ್ಟೇನಹಳ್ಳಿ ಪೊಲೀಸರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮಾ.19ರಂದು ಬಾಗಲಗುಂಟೆ ಹಾಗೂ ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಬಳಿಯಿಂದ 1.80 ಲಕ್ಷ ಮೌಲ್ಯದ ಕಳುವಾದ ವಸ್ತುಗಳು ಸಿಕ್ಕಿವೆ ಎಂದು ತಿಳಿಸಿದರು.
ಏ.14ರಂದು ಪುಟ್ಟೇನಹಳ್ಳಿಯಲ್ಲಿ ನಡೆದ ಮತ್ತೊಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದು, ಇವರಿಂದ 2 ಚಿನ್ನದ ಸರ, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು 4.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏ.01ರಂದು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಬಂಧನವಾಗಿದ್ದು, ಈತನಿಂದ 4.75 ಲಕ್ಷ ಮೌಲ್ಯದ 17 ಗ್ರಾಂ ಚಿನ್ನದ ಬಿಸ್ಕೆಟ್, 54 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…