ಒಂದೇ ರಾತ್ರಿ ಸುಮಾರು 8 ಟಿಪ್ಪರ್ ಲಾರಿಗಳ 16 ಬ್ಯಾಟರಿಗಳು, 150 ಲೀ. ಡೀಸೆಲ್ ಕಳವು

ರಾತ್ರಿ ವೇಳೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡುವ ಮುನ್ನ ಎಚ್ಚರ ವಹಿಸಬೇಕು. ಸ್ವಲ್ಪ ಯಾಮಾರಿದರೆ ಸ್ಥಳದಲ್ಲಿರುವ ವಾಹನಗಳು ಸೇರಿದಂತೆ ವಾಹನಗಳ ಬೆಲೆಬಾಳುವ ಎಲ್ಲಾ ಭಾಗಗಳು ಮಂಗಮಾಯವಾಗುವುದಂತು‌ ಗ್ಯಾರೆಂಟಿ.

ಒಂದೇ ರಾತ್ರಿ ಸುಮಾರು 8 ಟಿಪ್ಪರ್ ಲಾರಿಗಳ 16 ಬ್ಯಾಟರಿಗಳ ಕಳವು ಆಗಿರುವ ಘಟನೆ ನಡೆದಿದೆ.

ರೈಲ್ವೆ ಸ್ಟೇಷನ್ ಬಳಿ 12 ಬ್ಯಾಟರಿ, ಹಂಸ ಚಿಕನ್ ಸೆಂಟರ್ ಬಳಿ 4 ‌ಬ್ಯಾಟರಿ, ಪಾಲನಜೋಗಿಹಳ್ಳಿ ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯದ ಸುಮಾರು 150 ಲೀ. ಡೀಸೆಲ್ ಕಳವು ಮಾಡಲಾಗಿದೆ.

ಸ್ಕಾರ್ಪಿಯೋ ಕಾರಲ್ಲಿ ಮೂರು ಮಂದಿ ಬಂದು ರಾತ್ರಿ ವೇಳೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳ ಬ್ಯಾಟರಿ ಹಾಗೂ ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ….

ನಗರ ಠಾಣಾ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago