Categories: ರಾಜ್ಯ

ಒಂದೇ ವಾರದಲ್ಲಿ ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಕೆ: 20 ಟಿಎಂಸಿ ನೀರು ಉಳಿಸಿದ ತಜ್ಞರು: ರೈತರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ- ಸಿಎಂ ಸಿದ್ದರಾಮಯ್ಯ

ಒಂದೇ ವಾರದಲ್ಲಿ ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದಗಳು. ಎರಡನೇ ಬೆಳೆಗೂ ನೀರು ಸಿಗತ್ತದೆ, ಈ ಭಾಗದ ರೈತರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎರಡನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು.

ಗೇಟ್ ಮುರಿದಾಗ ನಮ್ಮ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು ಮತ್ತು ನಾನು ಚರ್ಚಿಸಿ ತುರ್ತಿನ ಕ್ರಮಕ್ಕೆ ಮುಂದಾದೆವು. ನಮ್ಮ ಸೂಚನೆಯಂತೆ ಒಂದೇ ವಾರದಲ್ಲಿ ಗೇಟ್ ಅಳವಡಿಸಿ 20 ಟಿಎಂಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯ ನಾಯ್ಡು ಮತ್ತು ಎಂಜಿನಿಯರ್ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದರು.

ಎಡ ಮತ್ತು ಬಲ ದಂಡೆ ಕಾಲುವೆ ಸೇರಿ ರಾಜ್ಯದ 9,26,438 ಎಕರೆ ಕೃಷಿಭೂಮಿಗೆ, ಆಂದ್ರಪ್ರದೇಶದ 6,25,097 ಎಕರೆ, ತೆಲಂಗಾಣದ 87,000 ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ತುಂಗಭದ್ರಾ ಅಣೆಕಟ್ಟು ಎರಡನೇ ಬಾರಿ ತುಂಬಿರುವುದ ಅತ್ಯಂತ ಸಂತಸದ ವಿಚಾರ ಎಂದು ಹೇಳಿದರು.

ವಿರೋಧ ಪಕ್ಷದ ಮಾತುಗಳಿಗೆ ಕಿವಿಕೊಡಬೇಡಿ. ಮೊದಲು ದಿನಕ್ಕೊಂದು ಸುಳ್ಳು ಹೇಳುತ್ತಿದ್ದ ಬಿಜೆಪಿ ಈಗ ಗಳಿಗೆಗೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ. ಬಿಜೆಪಿ ನಿಮ್ಮನ್ನು ಯಾಮಾರಿಸಿ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ ನನಗಿದೆ. ಏಕೆಂದರೆ ಕೊಪ್ಪಳ, ಬಳ್ಳಾರಿ, ವಿಜಯನಗರದ ಜನತೆ ಏನು ಅಂತ ನನ್ನ ಹೃದಯಕ್ಕೆ ಚನ್ನಾಗಿ ಗೊತ್ತು. ಬಿಜೆಪಿ ಮಾತನ್ನು ನಂಬಬೇಡಿ. ಎರಡೂ ಬೆಳೆಗೂ ನೀರು ಕೊಡುತ್ತೇವೆ ಎಂದು ತಿಳಿಸಿದರು.

ಅಣೆಕಟ್ಟೆಯ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13 ರಂದು ಇಲ್ಲಿಗೆ ಆಗಮಿಸಿದ್ದೆ. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ‌ ಅರ್ಪಿಸುತ್ತೇನೆ ಎಂದು ಆಗ ಹೇಳಿದ್ದೆ. ಕೊಟ್ಟ ಮಾತಿನಂತೆ ಇಂದು ಬಾಗಿನ ಅರ್ಪಿಸಿದ್ದೇನೆ ಎಂದರು.

ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆ ಕೊಟ್ಟಿದ್ದೀರಿ. ನಾವು ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ 46 ವಿಷಯಗಳನ್ನು, ಅನೇಕ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕದ ಅಭಿವಧ್ಧಿಗಾಗಿ ಘೋಷಿಸಿದ್ದೇವೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 371ಜೆ ಜಾರಿ ಮಾಡಲು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರ ವಿರೋಧಿಸಿತ್ತು. ಆದರೆ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ 371 ಜೆ ಜಾರಿ ಮಾಡಿದರು ಎಂದು ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಗೋವಿಂದರಾವ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ. ಈಗಾಗಲೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ₹5,000 ಕೋಟಿ ಘೋಷಿಸಿ ಆಗಿದೆ. ಕೇಂದ್ರ ಸರ್ಕಾರ ಕೂಡ ₹5,000 ಕೋಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಕೇಂದ್ರ ಕೊಡುತ್ತದೋ ಇಲ್ಲವೋ ನೀವೇ ನೋಡುತ್ತೀರಿ ಎಂದರು.

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

1 hour ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

4 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

15 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

17 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

17 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago