Categories: ರಾಜ್ಯ

ಒಂದೇ ಹುದ್ದೆಗೆ ಸರ್ಕಾರದಿಂದ ಐವರಿಗೆ ವರ್ಗಾವಣೆ ಆದೇಶ ಆರೋಪ: ಪ್ರತಿಪಕ್ಷ ನಾಯಕರಿಗೆ ಸುಳ್ಳು ಮಾಹಿತಿ; ವಿರೋಧ ಪಕ್ಷಗಳ ಆರೋಪದಲ್ಲಿ ಸತ್ಯದ ಕೊರತೆ

ಸರ್ಕಾರ ಬದಲಾದಂತೆ ವಿವಿಧ ಇಲಾಖೆಗಳಲ್ಲಿನ ಅಧಿಕಾರಿಗಳು, ಸಿಬ್ಬಂದಿಯ ಬದಲಾವಣೆ ಪ್ರಕ್ರಿಯೆ ಸಹಜವಾಗಿದೆ.

ಸಿಬ್ಬಂದಿ, ಅಧಿಕಾರಿಗಳು ಪ್ರಸಕ್ತ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಅವಧಿಯು 2023ರ ಜುಲೈ.3 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಕುರಿತು ಪ್ರತಿಪಕ್ಷಗಳ ನಾಯಕರುಗಳು ಮಾಡಿರುವ ಒಂದೇ ಹುದ್ದೆಗೆ ಸರ್ಕಾರದಿಂದ ಐವರಿಗೆ ವರ್ಗಾವಣೆ ಆದೇಶವೆಂಬುದು ಸುಳ್ಳು ಆರೋಪವಾಗಿದೆ.

ಸಾಮಾನ್ಯ ವರ್ಗಾವಣೆ ಅವಧಿಯಲ್ಲಿ ಅಧಿಕಾರಿಗಳ, ಸಿಬ್ಬಂದಿಯ ವರ್ಗಾವಣೆ ಕುರಿತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಇಲಾಖೆಗಳಿಗೆ ಸ್ಥಳ ನಿಯುಕ್ತಿ ಕೋರಿ ದಿನನಿತ್ಯ ನೂರಾರು ಪತ್ರಗಳು ಬರಲಿವೆ. ಅದರಂತೆ ಮುಖ್ಯಮಂತ್ರಿ ಅವರು ಮನವಿ ಮೇರೆಗೆ ಹುದ್ದೆಗೆ ಹೆಸರು ಶಿಫಾರಸ್ಸುಗಳನ್ನು ಮಾಡಿರುತ್ತಾರೆಯೇ ಹೊರತು ಸರ್ಕಾರಿ ಆದೇಶವನ್ನು ಹೊರಡಿಸಿರುವುದಿಲ್ಲ‌.

ಗ್ರೂಪ್ ‘ಎ’ ಅಧಿಕಾರಿಗಳು ಕನಿಷ್ಠ ಅವಧಿಯಲ್ಲಿ ವರ್ಗಾವಣೆಗೊಳ್ಳುವುದು ಸಾಮಾನ್ಯ. ಅಂತೆಯೇ  ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ(ಎಸ್‌ಹೆಚ್‌ಡಿಪಿ) ಯೋಜನಾ ಅನುಷ್ಠಾನ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲೆಕ್ಕಾಧಿಕಾರಿ ಎಂ.ಜಿ.ಮಂಜುನಾಥ ಅವರು ಅವರು ಒಂದೇ ಹುದ್ದೆಯಲ್ಲಿ ಮೂರು ವರ್ಷ ನಾಲ್ಕು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸದರಿ ಹುದ್ದೆಯಲ್ಲಿಯೇ ಮುಂದುವರಿಯುತ್ತಿದ್ದಾರೆ.

ಪರೀಕ್ಷಾರ್ಥ ಲೆಕ್ಕ ಪರಿಶೋಧನಾಧಿಕಾರಿ ಆಗಿದ್ದಾಗ ತರಬೇತಿಯಿಂದ ಬಿಡುಗಡೆಗೊಳಿಸಿ, ಎಂ.ಜಿ.ಮಂಜುನಾಥ್ ಅವರನ್ನು ಸರ್ಕಾರವು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಅವರ ಕಚೇರಿಯ ಲೆಕ್ಕಾ ಪರಿಶೋಧನಾಧಿಕಾರಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿತ್ತು. ಆದರೆ ಶಿವಮೊಗ್ಗ ಮೂಲದವರಾದ ಎಂ.ಜಿ.ಮಂಜುನಾಥ್ ಅವರು ಮಾಜಿ ಮುಖ್ಯಮಂತ್ರಿ ಅವರ ರಾಜಕೀಯ ಪ್ರಭಾವ ಬಳಸಿ ಆದೇಶವನ್ನು ಪರಿವರ್ತಿಸಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಿನೇಶ್‌ಕುಮಾರ್ ಅವರಿಗೆ ತೊಂದರೆ ನೀಡಿ ಸದರಿ ಹುದ್ದೆಗೆ ವರ್ಗಾವಣೆಗೊಂಡು(ಪ್ರಧಾನ ನಿರ್ದೇಶಕರ ಕಚೇರಿ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ರವರ ಅಧಿಕೃತವಾಗಿ ಜ್ಞಾಪನಾ ಪತ್ರ ಸಂಖ್ಯೆ: ಸಿಎಸ್ಎ1/ಎಒಎ/2019(1)/1722, ದಿನಾಂಕ: 05.02.2020) ವರದಿ ಮಾಡಿಕೊಂಡು ಕಾರ್ಯ ನಿರ್ವಹಿಸಿರುತ್ತಿರುತ್ತಾರೆ.

ಲೆಕ್ಕ ಪರಿಶೋಧನಾಧಿಕಾರಿ ಲೋಕೇಶ್ವರಿ ಅವರನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಲೆಕ್ಕ ಪರಿಶೋಧನಾಧಿಕಾರಿ ಅವರ ಹುದ್ದೆಗೆ ವರ್ಗಾಯಿಸಿ ಸರ್ಕಾರ ಆದೇಶ (ಆದೇಶ ಸಂಖ್ಯೆ: ಆಇ/362/ರಾಲೆಪ/2021, ದಿನಾಂಕ: 26.11.2021) ಹೊರಡಿಸಿದ್ದರೂ ಅಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಯೋಜನಾಧಿಕಾರಿ ಬಿ.ಗುರುಪ್ರಸಾದ್ ಅವರು ಲೋಕೇಶ್ವರಿ.ಕೆ.ಎಸ್. ಅವರನ್ನು ವರದಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿರುವುದಿಲ್ಲ. ಈ ಕುರಿತು ಲೆಕ್ಕ ಪರಿಶೋಧನಾಧಿಕಾರಿ ಲೋಕೇಶ್ವರಿ.ಕೆ.ಎಸ್ ಅವರು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ(ಕೆಎಟಿ) ಮೊರೆ ಹೋಗುತ್ತಾರೆ. ಲೋಕೇಶ್ವರಿ ಅವರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬೂದಿಹಾಳ್ ಅವರನ್ನು ಒಳಗೊಂಡ ಪೀಠವು ಪ್ಯಾರಾ-9ರಲ್ಲಿ ಮುಖ್ಯ ಯೋಜನಾಧಿಕಾರಿ ಬಿ.ಗುರುಪ್ರಸಾದ್ ಅವರಿಗೆ ಐದು ಸಾವಿರ ರೂಪಾಯಿ ದಂಡವನ್ನು ವಿಧಿಸುತ್ತದೆ.

ನಂತರ ಎಸ್‌ಹೆಚ್‌ಡಿಪಿಯ ಮುಖ್ಯ ಯೋಜನಾಧಿಕಾರಿ ಬಿ.ಗುರುಪ್ರಸಾದ್ ಹಾಗೂ ಲೆಕ್ಕ ಪರಿಶೋಧನಾಧಿಕಾರಿ ಎಂ.ಜಿ.ಮಂಜುನಾಥ್ ಅವರು ಕಾರ್ಯ ನಿರ್ವಹಿಸುತ್ತಿದ್ದ ಎಸ್‌ಹೆಚ್‌ಡಿಪಿಯ ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಯನ್ನು ಲೆಕ್ಕಾಧಿಕಾರಿ ಹುದ್ದಗೆ ಉನ್ನತೀಕರಿಸಿಲು ನಿಕಟಪೂರ್ವ ಮುಖ್ಯಮಂತ್ರಿ ಅವರ ಪ್ರಭಾವ ಬಳಸಿ, ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುತ್ತಾರೆ. ಅದರಂತೆ ಸರ್ಕಾರ ಆದೇಶ(ಅಧಿಸೂಚನೆ ಸಂಖ್ಯೆ: ಆಇ/303/ರಾಲೆಪ/2021/ಬೆಂಗಳೂರು, ದಿನಾಂಕ: 21.12.2021) ಹೊರಡಿಸಲಾಗುತ್ತದೆ.

ಮಾಜಿ ಮುಖ್ಯಮಂತ್ರಿ ಅವರ ಪ್ರಭಾವ ಬಳಸಿ ಉನ್ನತೀಕರಿಸಿದ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಬಡ್ತಿಯೊಂದಿಗೆ ಎಂ.ಜಿ.ಮಂಜುನಾಥ್ ಮುಂದುವರೆಯುತ್ತಾರೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ(ಎಸ್‌ಹೆಚ್‌ಡಿಪಿ) ಲೆಕ್ಕ ಪರಿಶೋಧನಾಧಿಕಾರಿ ಹಾಗೂ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಎಂ.ಜಿ.ಮಂಜುನಾಥ್ ಅವರು ಒಟ್ಟಾರೆ 3 ವರ್ಷ 4 ತಿಂಗಳು ಕಾಲ (ಪ್ರಸ್ತುತ ಎಸ್‌ಹೆಚ್‌ಡಿಪಿ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.) ಕಾರ್ಯ ನಿರ್ವಹಿಸಿರುತ್ತಾರೆ. ಆದಾಗೂ ಎಂ.ಜಿ.ಮಂಜುನಾಥ್ ಅವರು ಪ್ರಸಕ್ತ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಮುಖಂಡರುಗಳಿಗೆ ಸುಳ್ಳು ಮಾಹಿತಿ ನೀಡಿ ಕರ್ತವ್ಯ ಲೋಪ ಎಸಗಿರುತ್ತಾರೆ.

ಒಟ್ಟಿನಲ್ಲಿ ಪ್ರತಿಪಕ್ಷಗಳ ಹೇಳಿಕೆಯಂತೆ ಒಂದೇ ಹುದ್ದೆಗೆ ನಾಲ್ಕು ಅಥವಾ ಐದು ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿರುವುದು ಸುಳ್ಳು ಹೇಳಿಕೆಯಷ್ಟೇ ಹೊರತು ಒಂದು ಹುದ್ದೆಗೆ ಶಿಫಾರಸ್ಸು ಪತ್ರ(ಟಿಪ್ಪಣಿ ಪತ್ರ) ಆಗಿರುತ್ತದೆ.

ಒಟ್ಟಿನಲ್ಲಿ ಪ್ರತಿಪಕ್ಷಗಳ ಹೇಳಿಕೆಯಂತೆ ಒಂದೇ ಹುದ್ದೆಗೆ ನಾಲ್ಕು ಅಥವಾ ಐದು ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿಸಿರುವುದು ಸುಳ್ಳು ಹೇಳಿಕೆಯಷ್ಟೇ ಹೊರತು ಇದರಲ್ಲಿ ಯಾವುದೇ ಹುರುಳಿಲ್ಲ. ಟಿಪ್ಪಣಿ ಪತ್ರಗಳು ಗೋಪ್ಯತಾ ಮಾಹಿತಿ ಆಗಿದ್ದು ಈ ಮಾಹಿತಿಯು ಸೋರಿಕೆಯಾಗಿರುವುದು ಗಮನಾರ್ಹ ಸಂಗತಿಯಾಗಿದೆ.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

39 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

51 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago