Categories: ರಾಜ್ಯ

ಒಂದೇ ಹುದ್ದೆಗೆ ಸರ್ಕಾರದಿಂದ ಐವರಿಗೆ ವರ್ಗಾವಣೆ ಆದೇಶ ಆರೋಪ: ಪ್ರತಿಪಕ್ಷ ನಾಯಕರಿಗೆ ಸುಳ್ಳು ಮಾಹಿತಿ; ವಿರೋಧ ಪಕ್ಷಗಳ ಆರೋಪದಲ್ಲಿ ಸತ್ಯದ ಕೊರತೆ

ಸರ್ಕಾರ ಬದಲಾದಂತೆ ವಿವಿಧ ಇಲಾಖೆಗಳಲ್ಲಿನ ಅಧಿಕಾರಿಗಳು, ಸಿಬ್ಬಂದಿಯ ಬದಲಾವಣೆ ಪ್ರಕ್ರಿಯೆ ಸಹಜವಾಗಿದೆ.

ಸಿಬ್ಬಂದಿ, ಅಧಿಕಾರಿಗಳು ಪ್ರಸಕ್ತ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಅವಧಿಯು 2023ರ ಜುಲೈ.3 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಕುರಿತು ಪ್ರತಿಪಕ್ಷಗಳ ನಾಯಕರುಗಳು ಮಾಡಿರುವ ಒಂದೇ ಹುದ್ದೆಗೆ ಸರ್ಕಾರದಿಂದ ಐವರಿಗೆ ವರ್ಗಾವಣೆ ಆದೇಶವೆಂಬುದು ಸುಳ್ಳು ಆರೋಪವಾಗಿದೆ.

ಸಾಮಾನ್ಯ ವರ್ಗಾವಣೆ ಅವಧಿಯಲ್ಲಿ ಅಧಿಕಾರಿಗಳ, ಸಿಬ್ಬಂದಿಯ ವರ್ಗಾವಣೆ ಕುರಿತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಇಲಾಖೆಗಳಿಗೆ ಸ್ಥಳ ನಿಯುಕ್ತಿ ಕೋರಿ ದಿನನಿತ್ಯ ನೂರಾರು ಪತ್ರಗಳು ಬರಲಿವೆ. ಅದರಂತೆ ಮುಖ್ಯಮಂತ್ರಿ ಅವರು ಮನವಿ ಮೇರೆಗೆ ಹುದ್ದೆಗೆ ಹೆಸರು ಶಿಫಾರಸ್ಸುಗಳನ್ನು ಮಾಡಿರುತ್ತಾರೆಯೇ ಹೊರತು ಸರ್ಕಾರಿ ಆದೇಶವನ್ನು ಹೊರಡಿಸಿರುವುದಿಲ್ಲ‌.

ಗ್ರೂಪ್ ‘ಎ’ ಅಧಿಕಾರಿಗಳು ಕನಿಷ್ಠ ಅವಧಿಯಲ್ಲಿ ವರ್ಗಾವಣೆಗೊಳ್ಳುವುದು ಸಾಮಾನ್ಯ. ಅಂತೆಯೇ  ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ(ಎಸ್‌ಹೆಚ್‌ಡಿಪಿ) ಯೋಜನಾ ಅನುಷ್ಠಾನ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲೆಕ್ಕಾಧಿಕಾರಿ ಎಂ.ಜಿ.ಮಂಜುನಾಥ ಅವರು ಅವರು ಒಂದೇ ಹುದ್ದೆಯಲ್ಲಿ ಮೂರು ವರ್ಷ ನಾಲ್ಕು ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸದರಿ ಹುದ್ದೆಯಲ್ಲಿಯೇ ಮುಂದುವರಿಯುತ್ತಿದ್ದಾರೆ.

ಪರೀಕ್ಷಾರ್ಥ ಲೆಕ್ಕ ಪರಿಶೋಧನಾಧಿಕಾರಿ ಆಗಿದ್ದಾಗ ತರಬೇತಿಯಿಂದ ಬಿಡುಗಡೆಗೊಳಿಸಿ, ಎಂ.ಜಿ.ಮಂಜುನಾಥ್ ಅವರನ್ನು ಸರ್ಕಾರವು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಅವರ ಕಚೇರಿಯ ಲೆಕ್ಕಾ ಪರಿಶೋಧನಾಧಿಕಾರಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿತ್ತು. ಆದರೆ ಶಿವಮೊಗ್ಗ ಮೂಲದವರಾದ ಎಂ.ಜಿ.ಮಂಜುನಾಥ್ ಅವರು ಮಾಜಿ ಮುಖ್ಯಮಂತ್ರಿ ಅವರ ರಾಜಕೀಯ ಪ್ರಭಾವ ಬಳಸಿ ಆದೇಶವನ್ನು ಪರಿವರ್ತಿಸಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಿನೇಶ್‌ಕುಮಾರ್ ಅವರಿಗೆ ತೊಂದರೆ ನೀಡಿ ಸದರಿ ಹುದ್ದೆಗೆ ವರ್ಗಾವಣೆಗೊಂಡು(ಪ್ರಧಾನ ನಿರ್ದೇಶಕರ ಕಚೇರಿ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ರವರ ಅಧಿಕೃತವಾಗಿ ಜ್ಞಾಪನಾ ಪತ್ರ ಸಂಖ್ಯೆ: ಸಿಎಸ್ಎ1/ಎಒಎ/2019(1)/1722, ದಿನಾಂಕ: 05.02.2020) ವರದಿ ಮಾಡಿಕೊಂಡು ಕಾರ್ಯ ನಿರ್ವಹಿಸಿರುತ್ತಿರುತ್ತಾರೆ.

ಲೆಕ್ಕ ಪರಿಶೋಧನಾಧಿಕಾರಿ ಲೋಕೇಶ್ವರಿ ಅವರನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಲೆಕ್ಕ ಪರಿಶೋಧನಾಧಿಕಾರಿ ಅವರ ಹುದ್ದೆಗೆ ವರ್ಗಾಯಿಸಿ ಸರ್ಕಾರ ಆದೇಶ (ಆದೇಶ ಸಂಖ್ಯೆ: ಆಇ/362/ರಾಲೆಪ/2021, ದಿನಾಂಕ: 26.11.2021) ಹೊರಡಿಸಿದ್ದರೂ ಅಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಯೋಜನಾಧಿಕಾರಿ ಬಿ.ಗುರುಪ್ರಸಾದ್ ಅವರು ಲೋಕೇಶ್ವರಿ.ಕೆ.ಎಸ್. ಅವರನ್ನು ವರದಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿರುವುದಿಲ್ಲ. ಈ ಕುರಿತು ಲೆಕ್ಕ ಪರಿಶೋಧನಾಧಿಕಾರಿ ಲೋಕೇಶ್ವರಿ.ಕೆ.ಎಸ್ ಅವರು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ(ಕೆಎಟಿ) ಮೊರೆ ಹೋಗುತ್ತಾರೆ. ಲೋಕೇಶ್ವರಿ ಅವರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬೂದಿಹಾಳ್ ಅವರನ್ನು ಒಳಗೊಂಡ ಪೀಠವು ಪ್ಯಾರಾ-9ರಲ್ಲಿ ಮುಖ್ಯ ಯೋಜನಾಧಿಕಾರಿ ಬಿ.ಗುರುಪ್ರಸಾದ್ ಅವರಿಗೆ ಐದು ಸಾವಿರ ರೂಪಾಯಿ ದಂಡವನ್ನು ವಿಧಿಸುತ್ತದೆ.

ನಂತರ ಎಸ್‌ಹೆಚ್‌ಡಿಪಿಯ ಮುಖ್ಯ ಯೋಜನಾಧಿಕಾರಿ ಬಿ.ಗುರುಪ್ರಸಾದ್ ಹಾಗೂ ಲೆಕ್ಕ ಪರಿಶೋಧನಾಧಿಕಾರಿ ಎಂ.ಜಿ.ಮಂಜುನಾಥ್ ಅವರು ಕಾರ್ಯ ನಿರ್ವಹಿಸುತ್ತಿದ್ದ ಎಸ್‌ಹೆಚ್‌ಡಿಪಿಯ ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಯನ್ನು ಲೆಕ್ಕಾಧಿಕಾರಿ ಹುದ್ದಗೆ ಉನ್ನತೀಕರಿಸಿಲು ನಿಕಟಪೂರ್ವ ಮುಖ್ಯಮಂತ್ರಿ ಅವರ ಪ್ರಭಾವ ಬಳಸಿ, ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುತ್ತಾರೆ. ಅದರಂತೆ ಸರ್ಕಾರ ಆದೇಶ(ಅಧಿಸೂಚನೆ ಸಂಖ್ಯೆ: ಆಇ/303/ರಾಲೆಪ/2021/ಬೆಂಗಳೂರು, ದಿನಾಂಕ: 21.12.2021) ಹೊರಡಿಸಲಾಗುತ್ತದೆ.

ಮಾಜಿ ಮುಖ್ಯಮಂತ್ರಿ ಅವರ ಪ್ರಭಾವ ಬಳಸಿ ಉನ್ನತೀಕರಿಸಿದ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಬಡ್ತಿಯೊಂದಿಗೆ ಎಂ.ಜಿ.ಮಂಜುನಾಥ್ ಮುಂದುವರೆಯುತ್ತಾರೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ(ಎಸ್‌ಹೆಚ್‌ಡಿಪಿ) ಲೆಕ್ಕ ಪರಿಶೋಧನಾಧಿಕಾರಿ ಹಾಗೂ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಎಂ.ಜಿ.ಮಂಜುನಾಥ್ ಅವರು ಒಟ್ಟಾರೆ 3 ವರ್ಷ 4 ತಿಂಗಳು ಕಾಲ (ಪ್ರಸ್ತುತ ಎಸ್‌ಹೆಚ್‌ಡಿಪಿ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.) ಕಾರ್ಯ ನಿರ್ವಹಿಸಿರುತ್ತಾರೆ. ಆದಾಗೂ ಎಂ.ಜಿ.ಮಂಜುನಾಥ್ ಅವರು ಪ್ರಸಕ್ತ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಮುಖಂಡರುಗಳಿಗೆ ಸುಳ್ಳು ಮಾಹಿತಿ ನೀಡಿ ಕರ್ತವ್ಯ ಲೋಪ ಎಸಗಿರುತ್ತಾರೆ.

ಒಟ್ಟಿನಲ್ಲಿ ಪ್ರತಿಪಕ್ಷಗಳ ಹೇಳಿಕೆಯಂತೆ ಒಂದೇ ಹುದ್ದೆಗೆ ನಾಲ್ಕು ಅಥವಾ ಐದು ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿರುವುದು ಸುಳ್ಳು ಹೇಳಿಕೆಯಷ್ಟೇ ಹೊರತು ಒಂದು ಹುದ್ದೆಗೆ ಶಿಫಾರಸ್ಸು ಪತ್ರ(ಟಿಪ್ಪಣಿ ಪತ್ರ) ಆಗಿರುತ್ತದೆ.

ಒಟ್ಟಿನಲ್ಲಿ ಪ್ರತಿಪಕ್ಷಗಳ ಹೇಳಿಕೆಯಂತೆ ಒಂದೇ ಹುದ್ದೆಗೆ ನಾಲ್ಕು ಅಥವಾ ಐದು ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿಸಿರುವುದು ಸುಳ್ಳು ಹೇಳಿಕೆಯಷ್ಟೇ ಹೊರತು ಇದರಲ್ಲಿ ಯಾವುದೇ ಹುರುಳಿಲ್ಲ. ಟಿಪ್ಪಣಿ ಪತ್ರಗಳು ಗೋಪ್ಯತಾ ಮಾಹಿತಿ ಆಗಿದ್ದು ಈ ಮಾಹಿತಿಯು ಸೋರಿಕೆಯಾಗಿರುವುದು ಗಮನಾರ್ಹ ಸಂಗತಿಯಾಗಿದೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

11 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

12 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

17 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago