Categories: ಕೋಲಾರ

ಒಕ್ಕಲಿಗರು ರಾಜಕಾರಣಕ್ಕೆ ಸೀಮಿತವಾಗದೆ ಉದ್ಯಮಕ್ಕೆ ಆದ್ಯತೆ ನೀಡಿ- ಶ್ರೀ ಮಂಗಳಾನಂದನಾಥ ಸ್ವಾಮೀಜಿ ಕರೆ

ಕೋಲಾರ: ಜಿಲ್ಲೆಯ ಒಕ್ಕಲಿಗರು ಅರಿವಿನ ಮತ್ತು ಆರ್ಥಿಕ ಪರಿಸ್ಥಿತಿಯ ಕೊರತೆಯಿಂದಾಗಿ ಉದ್ಯಮ ಕ್ಷೇತ್ರದಿಂದ ಹಿಂದಿದ್ದಾರೆ ಕೇವಲ ಕೃಷಿಗೆ ಸೀಮಿತವಾಗದೆ ಉದ್ಯಮ ಕ್ಷೇತ್ರವನ್ನೂ ಆಯ್ಕೆ ಮಾಡಿಕೊಂಡು ಬೇರೆಯವರಿಗೂ ಉದ್ಯೋಗ ನೀಡುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ತಿಳಿಸಿದರು.

ನಗರದ ಹೊರವಲಯದ ಒಲಿವಿಯಾ ರೆಸಾರ್ಟ್ ನಲ್ಲಿ ಭಾನುವಾರ ಉದ್ಯಮಿ ಒಕ್ಕಲಿಗ ಫಸ್ಟ್ ಸರ್ಕಲ್ ಸೊಸೈಟಿಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗಹಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯ ಜನ ಶ್ರಮಜೀವಿಗಳು ಕೇವಲ ರೈತ ಉದ್ಯಮಿಗಳಾದರೆ ಸಾಲದು ಬದಲಾವಣೆಗೆ ತಕ್ಕಂತೆ ನಾವು ಬದಲಾಗಿ ಸ್ಪರ್ಧೆ ಎದುರಿಸಲು ಸನ್ನದ್ದರಾಗಬೇಕು. ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ಮಾಡಿ ಬೇರೆ ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಿ ಮುಂದಿನ ಪೀಳಿಗೆಗೆ ಸಹಕಾರಿಯಾಗುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಜಲಸಾರಿಗೆ ಮಂಡಳಿಯ ಸಿಇಒ ಜಯರಾಮ್ ರಾಯಪುರ, ಗಂಗರ ಅರಸರ ಕಾಲದಿಂದಲೂ ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯವನ್ನು ಕಟ್ಟಿ ಆಳಿದ್ದಾರೆ ನಾವುಗಳು ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು. ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ ಉದ್ಯೋಗ ನೀಡುವ ಉದ್ಯಮಿಯಾಗಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಒಕ್ಕಲಿಗರು ರಾಜಕೀಯದಲ್ಲಿ ಬಲಿಷ್ಠವಾಗಿದ್ದಾರೆ ಆದರೆ ಉದ್ಯಮ ಕ್ಷೇತ್ರದಲ್ಲಿ ಹಿಂದೆ ಇದ್ದಾರೆ ಸಮುದಾಯವು ಕಡಿಮೆ ಇರುವ ದಕ್ಷಿಣ ಕನ್ನಡ ಜಿಲ್ಲೆಗೆ ಹೋಲಿಕೆ ಮಾಡಿದರೆ ಇಲ್ಲಿ ಕೇವಲ 1% ಅಷ್ಟೇ ಉದ್ಯಮದಲ್ಲಿ ಇದ್ದಾರೆ ಇದರಲ್ಲಿ ರಾಜಕಾರಣಿಗಳ ಹೊಣೆಗಾರಿಕೆ ಹೆಚ್ಚಾಗಬೇಕು ಸಮುದಾಯದಲ್ಲಿ ಪರಸ್ಪರ ಒಗ್ಗಟ್ಟಿನಿಂದ ಅರಿವು ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಕೈಜೋಡಿಸಿ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯ ಜನ ಕೃಷಿಯ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ್ದಾರೆ ಆದರೆ ಉದ್ಯಮದಲ್ಲಿ ಅರಿವಿನ ಕೊರತೆಯಿಂದ ಕೈಗಾರಿಕೆಗಳು ಮಾಡಿ ಕೈ ಸುಟ್ಟುಕೊಂಡಿದ್ದಾರೆ ಯುವಕರಿಗೆ ಮಾರ್ಗದರ್ಶನ ನೀಡಿದರೆ ಭವಿಷ್ಯದ ಉದ್ಯಮಗಳಾಗಲಿದ್ದು ಬೇರೆಯವರಿಗೂ ಉದ್ಯೋಗ ನೀಡುವಂತಾಗುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಫಸ್ಟ್ ಸರ್ಕಲ್ ಸೊಸೈಟಿ ಜಿಲ್ಲಾ ಗೌರವ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಮಾತನಾಡಿ ಮನುಷ್ಯನ ಜೀವನಕ್ಕೆ ಉದ್ಯೋಗ ಮುಖ್ಯವಾಗಿದೆ ಒಕ್ಕಲಿಗರ ಉಪ ಜಾತಿಗಳಿಂದ ಸಮುದಾಯಕ್ಕೆ ಮಾರಕವಾಗಿದೆ ನಮ್ಮಲ್ಲಿಯೇ ಒಗ್ಗಟ್ಟಿ ಇಲ್ಲ ಉಪಜಾತಿಗಳ ಮನಸ್ಥಿತಿಯಿಂದ ಹೊರಬಂದು ನಾವು ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಉದ್ಯಮ ಮಾಡಿ ಬೇರೆಯವರನ್ನು ಬೆಳೆಸುವ ಗುಣ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಎಂಎಲ್ಸಿ ಇಂಚರ ಗೋವಿಂದರಾಜು, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಐಎಎಸ್ ಅಧಿಕಾರಿ ಕೆ.ಆರ್.ನಂದಿನಿ, ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್, ನೀರಾವರಿ ಹೋರಾಟಗಾರ ಆಂಜನೇಯರೆಡ್ಡಿ, ಉದ್ಯಮಿ ಡೆಕ್ಕನ್ ರಾಮಕೃಷ್ಣಪ್ಪ, ವೈದ್ಯ ಕೃಷ್ಣಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

3 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

3 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

9 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

17 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago