Categories: ಕೋಲಾರ

ಒಕ್ಕಲಿಗರು ರಾಜಕಾರಣಕ್ಕೆ ಸೀಮಿತವಾಗದೆ ಉದ್ಯಮಕ್ಕೆ ಆದ್ಯತೆ ನೀಡಿ- ಶ್ರೀ ಮಂಗಳಾನಂದನಾಥ ಸ್ವಾಮೀಜಿ ಕರೆ

ಕೋಲಾರ: ಜಿಲ್ಲೆಯ ಒಕ್ಕಲಿಗರು ಅರಿವಿನ ಮತ್ತು ಆರ್ಥಿಕ ಪರಿಸ್ಥಿತಿಯ ಕೊರತೆಯಿಂದಾಗಿ ಉದ್ಯಮ ಕ್ಷೇತ್ರದಿಂದ ಹಿಂದಿದ್ದಾರೆ ಕೇವಲ ಕೃಷಿಗೆ ಸೀಮಿತವಾಗದೆ ಉದ್ಯಮ ಕ್ಷೇತ್ರವನ್ನೂ ಆಯ್ಕೆ ಮಾಡಿಕೊಂಡು ಬೇರೆಯವರಿಗೂ ಉದ್ಯೋಗ ನೀಡುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ತಿಳಿಸಿದರು.

ನಗರದ ಹೊರವಲಯದ ಒಲಿವಿಯಾ ರೆಸಾರ್ಟ್ ನಲ್ಲಿ ಭಾನುವಾರ ಉದ್ಯಮಿ ಒಕ್ಕಲಿಗ ಫಸ್ಟ್ ಸರ್ಕಲ್ ಸೊಸೈಟಿಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗಹಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯ ಜನ ಶ್ರಮಜೀವಿಗಳು ಕೇವಲ ರೈತ ಉದ್ಯಮಿಗಳಾದರೆ ಸಾಲದು ಬದಲಾವಣೆಗೆ ತಕ್ಕಂತೆ ನಾವು ಬದಲಾಗಿ ಸ್ಪರ್ಧೆ ಎದುರಿಸಲು ಸನ್ನದ್ದರಾಗಬೇಕು. ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ಮಾಡಿ ಬೇರೆ ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಿ ಮುಂದಿನ ಪೀಳಿಗೆಗೆ ಸಹಕಾರಿಯಾಗುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಜಲಸಾರಿಗೆ ಮಂಡಳಿಯ ಸಿಇಒ ಜಯರಾಮ್ ರಾಯಪುರ, ಗಂಗರ ಅರಸರ ಕಾಲದಿಂದಲೂ ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯವನ್ನು ಕಟ್ಟಿ ಆಳಿದ್ದಾರೆ ನಾವುಗಳು ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು. ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ ಉದ್ಯೋಗ ನೀಡುವ ಉದ್ಯಮಿಯಾಗಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಒಕ್ಕಲಿಗರು ರಾಜಕೀಯದಲ್ಲಿ ಬಲಿಷ್ಠವಾಗಿದ್ದಾರೆ ಆದರೆ ಉದ್ಯಮ ಕ್ಷೇತ್ರದಲ್ಲಿ ಹಿಂದೆ ಇದ್ದಾರೆ ಸಮುದಾಯವು ಕಡಿಮೆ ಇರುವ ದಕ್ಷಿಣ ಕನ್ನಡ ಜಿಲ್ಲೆಗೆ ಹೋಲಿಕೆ ಮಾಡಿದರೆ ಇಲ್ಲಿ ಕೇವಲ 1% ಅಷ್ಟೇ ಉದ್ಯಮದಲ್ಲಿ ಇದ್ದಾರೆ ಇದರಲ್ಲಿ ರಾಜಕಾರಣಿಗಳ ಹೊಣೆಗಾರಿಕೆ ಹೆಚ್ಚಾಗಬೇಕು ಸಮುದಾಯದಲ್ಲಿ ಪರಸ್ಪರ ಒಗ್ಗಟ್ಟಿನಿಂದ ಅರಿವು ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಕೈಜೋಡಿಸಿ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯ ಜನ ಕೃಷಿಯ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ್ದಾರೆ ಆದರೆ ಉದ್ಯಮದಲ್ಲಿ ಅರಿವಿನ ಕೊರತೆಯಿಂದ ಕೈಗಾರಿಕೆಗಳು ಮಾಡಿ ಕೈ ಸುಟ್ಟುಕೊಂಡಿದ್ದಾರೆ ಯುವಕರಿಗೆ ಮಾರ್ಗದರ್ಶನ ನೀಡಿದರೆ ಭವಿಷ್ಯದ ಉದ್ಯಮಗಳಾಗಲಿದ್ದು ಬೇರೆಯವರಿಗೂ ಉದ್ಯೋಗ ನೀಡುವಂತಾಗುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಫಸ್ಟ್ ಸರ್ಕಲ್ ಸೊಸೈಟಿ ಜಿಲ್ಲಾ ಗೌರವ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಮಾತನಾಡಿ ಮನುಷ್ಯನ ಜೀವನಕ್ಕೆ ಉದ್ಯೋಗ ಮುಖ್ಯವಾಗಿದೆ ಒಕ್ಕಲಿಗರ ಉಪ ಜಾತಿಗಳಿಂದ ಸಮುದಾಯಕ್ಕೆ ಮಾರಕವಾಗಿದೆ ನಮ್ಮಲ್ಲಿಯೇ ಒಗ್ಗಟ್ಟಿ ಇಲ್ಲ ಉಪಜಾತಿಗಳ ಮನಸ್ಥಿತಿಯಿಂದ ಹೊರಬಂದು ನಾವು ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಉದ್ಯಮ ಮಾಡಿ ಬೇರೆಯವರನ್ನು ಬೆಳೆಸುವ ಗುಣ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಎಂಎಲ್ಸಿ ಇಂಚರ ಗೋವಿಂದರಾಜು, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಐಎಎಸ್ ಅಧಿಕಾರಿ ಕೆ.ಆರ್.ನಂದಿನಿ, ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್, ನೀರಾವರಿ ಹೋರಾಟಗಾರ ಆಂಜನೇಯರೆಡ್ಡಿ, ಉದ್ಯಮಿ ಡೆಕ್ಕನ್ ರಾಮಕೃಷ್ಣಪ್ಪ, ವೈದ್ಯ ಕೃಷ್ಣಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

14 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

14 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

19 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

4 days ago