ಒಕ್ಕೂಟ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ  ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ-ನಂ.ಮಹಾದೇವ್

ಕರ್ನಾಟಕ ರಾಜ್ಯದಲ್ಲಿ ಕನ್ನಡ ಚುನಾವಣೆಯ ವಿಷಯ ಆಗಬೇಕಾಗಿದೆ. ಒಕ್ಕೂಟ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ  ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ  ನಂ.ಮಹಾದೇವ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು.

ಒಕ್ಕೂಟ ವ್ಯವಸ್ಥೆಯ ಸರ್ಕಾರದಲ್ಲಿ ಹಿಂದಿ ಭಾಷೆಯ ರಾಜ್ಯಗಳಿಗೆ ಸಿಗುತ್ತಿರುವ ಮನ್ನಣೆ ದಕ್ಷಿಣ ಭಾರತದ ರಾಜ್ಯಗಳಿಗೆ ಸಿಗುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ.  ನಮ್ಮ ರಾಜ್ಯದಲ್ಲಿರುವ ಬ್ಯಾಂಕ್, ಅಂಚೆ, ರೈಲ್ವೆ ಮುಂತಾದ ಕಡೆಗಳಲ್ಲಿ ಕನ್ನಡ ಭಾಷೆಗೆ ಸೂಕ್ತ ಮನ್ನಣೆ ಇಲ್ಲದಾಗಿದೆ. ಒಕ್ಕೂಟ ವ್ಯವಸ್ಥೆ ಸರ್ಕಾರದಲ್ಲಿ  ಕರ್ನಾಟಕದ ಜನಪ್ರತಿನಿಧಿಗಳು ಕನ್ನಡದ ಹಿತವನ್ನು ಕಾಪಾಡುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ  ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಗ್ರ ಸ್ಥಾನ ಇರಲೇಬೇಕು.  ಪ್ರತಿಯೊಬ್ಬ ಕನ್ನಡಿಗರಲ್ಲೂ  ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ  ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ.  ಕನ್ನಡವನ್ನು  ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು  ಮಾತ್ರ ಸಾಧ್ಯ ಎಂಬುದನ್ನು ಎಲ್ಲಾ ಕನ್ನಡಿಗರು ಅರಿಯಬೇಕಾಗಿದೆ. ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವುದು ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಆಯುಕ್ತ ವೆಂಕಟರಾಜು, ಭಾರತ ಸೇವಾದಳ‌ ಕಾರ್ಯದರ್ಶಿ ಜ್ಯೋತಿಕುಮಾರ್,   ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜುಶಿರವಾರ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ  ಪ್ರಮೀಳಾಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ‌ಸಾ.ಲ.ಕಮಲನಾಥ್,  ಕಸಾಪ ಪದಾಧಿಕಾರಿಗಳಾದ ಆರ್.ಗೋವಿಂದರಾಜು, ಜಿ.ಎಂ.ನಾಗರಾಜ್, ಜಿ.ಸುರೇಶ್, ಮುನಿರಾಜು, ಸಫೀರ್, ನಾಗರತ್ನಮ್ಮ, ಚಿದಾನಂದ್, ಕನ್ನಡಪರ ಸಂಘಟನೆಗಳ ಮುಖಂಡರುಗಳಾದ  ನಾಗರಾಜು, ಅಗ್ನಿವೆಂಕಟೇಶ್, ಕಾರ್ಮಿಕ ಮುಖಂಡ ಪಿ.ಎ.ವೆಂಕಟೇಶ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ತೀರ್ಥಲಿಂಗಪ್ಪ, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಸನ್ಮಾನ :- 

ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ.ಶ್ರೀಕಾಂತ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರರಾದ ನಂ.ಮಹಾದೇವ ಮತ್ತು ಜಿ.ಸುರೇಶ್  ಅವರುಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನ ನಡೆಯಿತು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

5 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

6 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

6 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

8 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

11 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

12 hours ago