ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಾಗುವುದು: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್

ಪ್ರತಿ ರಾಜ್ಯಗಳ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವೇಳೆ ಇತರೆ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ, ಸಾಮಾಜಿಕ ನ್ಯಾಯದೊಂದಿಗೆ ಅಭ್ಯರ್ಥಿಗಳನ್ನು ಅಖೈರು ಮಾಡುವ ಬಿಜೆಪಿ. ಈ ಬಾರಿ ದೇಶಕ್ಕೆ ಕರ್ನಾಟಕ ಮಾಡೆಲ್ ರೀತಿಯಲ್ಲಿ ಅಭ್ಯರ್ಥಿಗಳನ್ನು ಪಕ್ಷ ಘೋಷಣೆ ಮಾಡಿದೆ ಎಂದು ಕ್ಷೇತ್ರದ ಅಭ್ಯರ್ಥಿ ಧೀರಜ್ ಮುನಿರಾಜು ತಿಳಿಸಿದರು.

ನಗರದಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಾರಿ ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷದ ವರಿಷ್ಠರು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಪಕ್ಷದ ಸಂಸದೀಯ ಮಂಡಳಿಗೆ ಧನ್ಯವಾದ. ಕಾರ್ಯಕರ್ತರೆ ಸೃಷ್ಟಿ ಮಾಡಿದ ಅಭ್ಯರ್ಥಿಯಾಗಿ ನಾನು ಆಯ್ಕೆಯಾಗಿದ್ದೇನೆ.

ಶೀಘ್ರವಾಗಿ ಚುನಾವಣಾ ಕಚೇರಿಯನ್ನ ತೆರೆದು ಪ್ರಚಾರ ಆರಂಭ ಮಾಡಲಿದ್ದೇವೆ. ಈಗಾಗಲೇ ಬೂತ್ ವಿಜಯ ಅಭಿಯಾನ, ವಿಜಯ ಸಂಕಲ್ಪ ಯಾತ್ರೆ ಮೂಲಕ ಪಕ್ಷಕ್ಕೆ ಶಕ್ತಿ ಬಂದಿದೆ. ಒಂದೊಂದು ಬೂತ್ ಗೆ 36 ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಪಕ್ಷದ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು. ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸಹಿತ
ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು ಪ್ರಚಾರಕ್ಕೆ ಬರಲಿದ್ದಾರೆ ಎಂದರು.

ಟಿಕೆಟ್ ವಂಚಿತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು:

ಕೇಂದ್ರ ಮತ್ತು ರಾಜ್ಯದ ನಾಯಕರು
ವ್ಯವಸ್ಥಿತವಾಗಿ ಟಿಕೆಟ್ ಘೋಷಣೆ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ 6ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಸಹಜವಾಗಿ ಟಿಕೆಟ್ ವಂಚಿತರಿಗೆ ನೋವಾಗಿದೆ. ಈ ಬಗ್ಗೆ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಉಸ್ತುವಾರಿ ಸಚಿವರು, ಜಿಲ್ಲಾಧ್ಯಕ್ಷರು ಸಮ್ಮುಖದಲ್ಲಿ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಾಗುವುದು ಎಂದರು.

ಹಾಲಿ ಶಾಸಕರ 10 ವರ್ಷದ ವೈಫಲ್ಯಗಳ ಬಗ್ಗೆ ಜನರಿಗೆ ತಿಳಿಸಿ, ಕೆಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಗಳನ್ನು, ಯೋಜನೆಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡಲಾಗುವುದು.
ದೊಡ್ಡಬಳ್ಳಾಪುರಕ್ಕೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದರು.

ಹಿರಿಯ ನಾಯಕ ಕೆಎಂ ಹನುಮಂತರಾಯಪ್ಪ ಮಾತನಾಡಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿರುವ ನಾಯಕರನ್ನು ಬೃಹತ್ ಸಮಾರಂಭದ ಮೂಲಕ ಅದ್ಧೂರಿಯಾಗಿ ಸ್ವಾಗತ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿ.ಸಿ ನಾರಾಯಣಸ್ವಾಮಿ, ನಗರಾಧ್ಯಕ್ಷ ಶಿವಶಂಕರ್, ಪದಾಧಿಕಾರಿಗಳಾದ ಪುಷ್ಪಶಿವಶಂಕರ್, ಗೋಪಿನಾಥ್, ನಾರಾಯಣಶರ್ಮ, ಆನಂದ್ ಮೂರ್ತಿ, ರಾಮಕಿಟ್ಟಿ, ನಾಗೇಶ್ ಮತ್ತಿತರರು ಇದ್ದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

20 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

22 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago