ಒಡಿಶಾದಲ್ಲಿ 3 ರೈಲುಗಳ ಮಧ್ಯೆ ಭೀಕರ ಅಪಘಾತ; 233ಕ್ಕೇರಿದ ಸಾವಿನ ಸಂಖ್ಯೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಎರಡಲ್ಲ.. ಬದಲಿಗೆ ಮೂರು ರೈಲುಗಳು ಡಿಕ್ಕಿಯಾಗಿವೆ ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 233ಕ್ಕೆ ಏರಿದೆ. 900ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್‌ ಹಾಗೂ ಒಂದು ಗೂಡ್ಸ್‌ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿವೆ.

ಇದೂವರೆಗೂ 200 ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಒಡಿಶಾ ಅಗ್ನಿಶಾಮಕ ಸೇವೆಗಳ ಡಿಜಿ ಸುಧಾಂಶು ಸಾರಂಗಿ ತಡರಾತ್ರಿ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ : ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರೈಲು ದುರಂತ ಹಿನ್ನೆಲೆ ಒಡಿಶಾದಲ್ಲಿಂದು ಶೋಕದಿನಾಚರಣೆ ಮಾಡಲು ತೀರ್ಮಾನಿಸಿದ‌ ಸರ್ಕಾರ

Ramesh Babu

Journalist

Recent Posts

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

1 hour ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

14 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

14 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

19 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

21 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

24 hours ago