ಒಡಿಶಾದಲ್ಲಿ 3 ರೈಲುಗಳ ಮಧ್ಯೆ ಭೀಕರ ಅಪಘಾತ; 233ಕ್ಕೇರಿದ ಸಾವಿನ ಸಂಖ್ಯೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಎರಡಲ್ಲ.. ಬದಲಿಗೆ ಮೂರು ರೈಲುಗಳು ಡಿಕ್ಕಿಯಾಗಿವೆ ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 233ಕ್ಕೆ ಏರಿದೆ. 900ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್‌ ಹಾಗೂ ಒಂದು ಗೂಡ್ಸ್‌ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿವೆ.

ಇದೂವರೆಗೂ 200 ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಒಡಿಶಾ ಅಗ್ನಿಶಾಮಕ ಸೇವೆಗಳ ಡಿಜಿ ಸುಧಾಂಶು ಸಾರಂಗಿ ತಡರಾತ್ರಿ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ : ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರೈಲು ದುರಂತ ಹಿನ್ನೆಲೆ ಒಡಿಶಾದಲ್ಲಿಂದು ಶೋಕದಿನಾಚರಣೆ ಮಾಡಲು ತೀರ್ಮಾನಿಸಿದ‌ ಸರ್ಕಾರ

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

24 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago