ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಎರಡಲ್ಲ.. ಬದಲಿಗೆ ಮೂರು ರೈಲುಗಳು ಡಿಕ್ಕಿಯಾಗಿವೆ ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 233ಕ್ಕೆ ಏರಿದೆ. 900ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್ ಹಾಗೂ ಒಂದು ಗೂಡ್ಸ್ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ಡಿಕ್ಕಿಯಾಗಿವೆ.
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರಿನಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ : ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರೈಲು ದುರಂತ ಹಿನ್ನೆಲೆ ಒಡಿಶಾದಲ್ಲಿಂದು ಶೋಕದಿನಾಚರಣೆ ಮಾಡಲು ತೀರ್ಮಾನಿಸಿದ ಸರ್ಕಾರ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…