ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

3 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

4 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

6 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

14 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

16 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago