ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

5 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

14 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago