ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

5 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

9 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

10 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

13 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago