ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

4 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago