ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

6 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

16 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

17 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago