ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

26 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago