ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.
ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.
ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:
ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.
ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.
ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.
ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.
ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…