Categories: ಕೊಡಗು

ಒಣ ಮೀನು ಕದ್ದ ಕಳ್ಳನಿಗೆ ವರ್ತಕರಿಂದ ಧರ್ಮದೇಟು

ಮಾರುಕಟ್ಟೆಯಲ್ಲಿ ನಿರಂತರವಾಗಿ ಕಳ್ಳತನ ‌ಮಾಡುತಿದ್ದ ಚಾಲಕಿ ಕಳ್ಳನನ್ನು ಮಾಲು ಸಮೇತ ವಶಕ್ಕೆ ಪಡೆದು ಧರ್ಮದೇಟು ನೀಡಿದ ಘಟನೆ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.

ವಿರಾಜಪೇಟೆ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಮರ (ತೋರ) ಗ್ರಾಮದ ನಿವಾಸಿಯಾದ ಸುರೇಶ್ (51) ಕಳ್ಳತನ ವೆಸಗಿ ವರ್ತಕರಿಂದ ಧರ್ಮದೇಟು ತಿಂದ ವ್ಯಕ್ತಿ.

*ಘಟನೆಯ ಸಾರ*…..

ಹಲವು ತಿಂಗಳುಗಳಿಂದ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸಿದ್ದವಾಗಿದ್ದ ಮಳಿಗೆ ಮಾಲೀಕರ ತರಕಾರಿ ಚೀಲಗಳು ಮಂಗಮಾಯವಾಗುತಿತ್ತು. ಅವು ಕಳ್ಳತನವಾಗಿದ್ದವು. 15 ದಿನಗಳ ಹಿಂದೆ 50 ಕೆ.ಜಿ. ಬೀಟ್ರೂಟ್ ಚೀಲ, ತಿಂಗಳ ಹಿಂದೆ 20 ಕೆ.ಜಿ.ತೂಕದ ಬೀನ್ಸ್ ಚೀಲ, 10 ದಿನಗಳ ಹಿಂದೆ. 10 ಕೆ.ಜಿ. ತೂಕದ ಹಾಗಲಕಾಯಿ ಚೀಲ ಕಳ್ಳತನವಾಗಿತ್ತು.

ನಿರಂತರ ಕಳ್ಳತನದಿಂದ ಮಾರುಕಟ್ಟೆಯ ವರ್ತಕರು ಕಂಗಾಲಾಗಿದ್ದರು. ತರಕಾರಿ ಮಾರುಕಟ್ಟೆಯ ಒಂದು ಅಂಚಿನಲ್ಲಿ ಒಣ ಮೀನು ಮಾರುಕಟ್ಟೆ ಇದೆ. ಈ ಬಾರಿ ತರಕಾರಿ ಬದಲು ಒಣ ಮೀನಿಗೆ ಕೈ ಹಾಕಿ ಸಿಲುಕಿ ಹಾಕಿಕೊಂಡಿದ್ದಾನೆ.

ಚಾಲಕಿ ಕಳ್ಳ ಸಂತೆಗೆ ಬಂದು ಮೀನು ಕಳ್ಳತನ ಮಾಡಲು ಹೊಂಚು ಹಾಕಿದ್ದಾನೆ. ಯಾರು ಇಲ್ಲದಿರುವುದನ್ನು ಗಮನಿಸಿ ಪ್ಲಾಸ್ಟಿಕ್ ಚೀಲ ಒಂದರಲ್ಲಿ ಬೆಲೆಬಾಳುವ ತೆರೆಂಡಿ ಮೀನುಗಳನ್ನು ಹಾಕಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಮುಂಜಾನೆ ಮಸೀದಿಗೆ ತೆರಳುವ ವ್ಯಕ್ತಿಯೊರ್ವರು ಮಾರುಕಟ್ಟೆಯಿಂದ ಅನಾಮಧೇಯ ವ್ಯಕ್ತಿ ಸಂಶಯಾಸ್ಪದವಾಗಿ ತೆರಳುತಿರುವುದನ್ನು ನೋಡಿದ್ದಾರೆ. ಮಾಹಿತಿ ಸ್ನೇಹಿತರಿಗೆ ತಿಳಿಸಿದ್ದಾರೆ. ವ್ಯಕ್ತಿಯನ್ನು ಹಿಂಬಾಲಿಸಿ ಮೂರ್ನಾಡು ರಸ್ತೆಯ ತಿರುವಿನಲ್ಲಿ ವ್ಯಕ್ತಿಯನ್ನು ಮಾಲು ಸಮೇತವಾಗಿ ಹಿಡಿದಿದ್ದಾರೆ.

ವ್ಯಕ್ತಿಯನ್ನು ಮಾರುಕಟ್ಟೆ ಎಳೆ ತಂದು ವಿಚಾರಣೆ ಮಾಡಿದ್ದಾರೆ. ಏಟು ತಿಂದ ವ್ಯಕ್ತಿ ಸಮೀರ್ ಎಂಬುವವರ ಒಣ ಮೀನು ಮಳಿಗೆಯಿಂದ ತೆರಂಡಿ ಮೀನು ಕಳ್ಳತನ ಮಾಡಿರಯವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.

ತೆರಂಡಿ ಮೀನು ಕೆ.ಜಿ. ಒಂದಕ್ಕೆ 450 ರೂ. ಬೆಲೆಯಾಗಿದ್ದು. ಸುಮಾರು 10 ಕೆ.ಜಿ. ಮೀನು ಕಳ್ಳತನ ಮಾಡಿ ಮಾರಾಟಕ್ಕೆ ತೆರಳುತಿದ್ದ ಎನ್ನಲಾಗಿದೆ.

ಇಂತಹ ಘಟನೆಗಳು ಹಲವು ಬಾರಿ ನಡೆದಿದೆ. ಇದೇ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದಲ್ಲಿ ಗಂಟೆಗಳು ಕಳೆದ ನಂತರ ಮನೆಗೆ ಸೇರುತ್ತಾನೆ. ಆದುದರಿಂದ ನಾವೇ ಅಲ್ಪ ಮಟ್ಟದ ಶಿಕ್ಷೆ ನೀಡಿ ಕಳಿಸಿದ್ದೇವೆ. ಇತನೀಗೆ ಕುಡಿತದ ಚಟವಿದ್ದು ಕುಡಿಯಲು ಹಣವಿಲ್ಲದಾಗ ಮಳಿಗೆಗೆ ಕನ್ನ ಹಾಕಿ ಮಾಲು ಮಾರಾಟ ಮಾಡಿ ಅಂದಿನ ಜೀವನ ಸಾಗಿಸುತ್ತಾನೆ ಎಂದು ವರ್ತಕರೋಬ್ಬರು ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

29 minutes ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

41 minutes ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

3 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

14 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

15 hours ago