Categories: ಕೊಡಗು

ಒಣ ಮೀನು ಕದ್ದ ಕಳ್ಳನಿಗೆ ವರ್ತಕರಿಂದ ಧರ್ಮದೇಟು

ಮಾರುಕಟ್ಟೆಯಲ್ಲಿ ನಿರಂತರವಾಗಿ ಕಳ್ಳತನ ‌ಮಾಡುತಿದ್ದ ಚಾಲಕಿ ಕಳ್ಳನನ್ನು ಮಾಲು ಸಮೇತ ವಶಕ್ಕೆ ಪಡೆದು ಧರ್ಮದೇಟು ನೀಡಿದ ಘಟನೆ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.

ವಿರಾಜಪೇಟೆ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಮರ (ತೋರ) ಗ್ರಾಮದ ನಿವಾಸಿಯಾದ ಸುರೇಶ್ (51) ಕಳ್ಳತನ ವೆಸಗಿ ವರ್ತಕರಿಂದ ಧರ್ಮದೇಟು ತಿಂದ ವ್ಯಕ್ತಿ.

*ಘಟನೆಯ ಸಾರ*…..

ಹಲವು ತಿಂಗಳುಗಳಿಂದ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸಿದ್ದವಾಗಿದ್ದ ಮಳಿಗೆ ಮಾಲೀಕರ ತರಕಾರಿ ಚೀಲಗಳು ಮಂಗಮಾಯವಾಗುತಿತ್ತು. ಅವು ಕಳ್ಳತನವಾಗಿದ್ದವು. 15 ದಿನಗಳ ಹಿಂದೆ 50 ಕೆ.ಜಿ. ಬೀಟ್ರೂಟ್ ಚೀಲ, ತಿಂಗಳ ಹಿಂದೆ 20 ಕೆ.ಜಿ.ತೂಕದ ಬೀನ್ಸ್ ಚೀಲ, 10 ದಿನಗಳ ಹಿಂದೆ. 10 ಕೆ.ಜಿ. ತೂಕದ ಹಾಗಲಕಾಯಿ ಚೀಲ ಕಳ್ಳತನವಾಗಿತ್ತು.

ನಿರಂತರ ಕಳ್ಳತನದಿಂದ ಮಾರುಕಟ್ಟೆಯ ವರ್ತಕರು ಕಂಗಾಲಾಗಿದ್ದರು. ತರಕಾರಿ ಮಾರುಕಟ್ಟೆಯ ಒಂದು ಅಂಚಿನಲ್ಲಿ ಒಣ ಮೀನು ಮಾರುಕಟ್ಟೆ ಇದೆ. ಈ ಬಾರಿ ತರಕಾರಿ ಬದಲು ಒಣ ಮೀನಿಗೆ ಕೈ ಹಾಕಿ ಸಿಲುಕಿ ಹಾಕಿಕೊಂಡಿದ್ದಾನೆ.

ಚಾಲಕಿ ಕಳ್ಳ ಸಂತೆಗೆ ಬಂದು ಮೀನು ಕಳ್ಳತನ ಮಾಡಲು ಹೊಂಚು ಹಾಕಿದ್ದಾನೆ. ಯಾರು ಇಲ್ಲದಿರುವುದನ್ನು ಗಮನಿಸಿ ಪ್ಲಾಸ್ಟಿಕ್ ಚೀಲ ಒಂದರಲ್ಲಿ ಬೆಲೆಬಾಳುವ ತೆರೆಂಡಿ ಮೀನುಗಳನ್ನು ಹಾಕಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಮುಂಜಾನೆ ಮಸೀದಿಗೆ ತೆರಳುವ ವ್ಯಕ್ತಿಯೊರ್ವರು ಮಾರುಕಟ್ಟೆಯಿಂದ ಅನಾಮಧೇಯ ವ್ಯಕ್ತಿ ಸಂಶಯಾಸ್ಪದವಾಗಿ ತೆರಳುತಿರುವುದನ್ನು ನೋಡಿದ್ದಾರೆ. ಮಾಹಿತಿ ಸ್ನೇಹಿತರಿಗೆ ತಿಳಿಸಿದ್ದಾರೆ. ವ್ಯಕ್ತಿಯನ್ನು ಹಿಂಬಾಲಿಸಿ ಮೂರ್ನಾಡು ರಸ್ತೆಯ ತಿರುವಿನಲ್ಲಿ ವ್ಯಕ್ತಿಯನ್ನು ಮಾಲು ಸಮೇತವಾಗಿ ಹಿಡಿದಿದ್ದಾರೆ.

ವ್ಯಕ್ತಿಯನ್ನು ಮಾರುಕಟ್ಟೆ ಎಳೆ ತಂದು ವಿಚಾರಣೆ ಮಾಡಿದ್ದಾರೆ. ಏಟು ತಿಂದ ವ್ಯಕ್ತಿ ಸಮೀರ್ ಎಂಬುವವರ ಒಣ ಮೀನು ಮಳಿಗೆಯಿಂದ ತೆರಂಡಿ ಮೀನು ಕಳ್ಳತನ ಮಾಡಿರಯವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.

ತೆರಂಡಿ ಮೀನು ಕೆ.ಜಿ. ಒಂದಕ್ಕೆ 450 ರೂ. ಬೆಲೆಯಾಗಿದ್ದು. ಸುಮಾರು 10 ಕೆ.ಜಿ. ಮೀನು ಕಳ್ಳತನ ಮಾಡಿ ಮಾರಾಟಕ್ಕೆ ತೆರಳುತಿದ್ದ ಎನ್ನಲಾಗಿದೆ.

ಇಂತಹ ಘಟನೆಗಳು ಹಲವು ಬಾರಿ ನಡೆದಿದೆ. ಇದೇ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದಲ್ಲಿ ಗಂಟೆಗಳು ಕಳೆದ ನಂತರ ಮನೆಗೆ ಸೇರುತ್ತಾನೆ. ಆದುದರಿಂದ ನಾವೇ ಅಲ್ಪ ಮಟ್ಟದ ಶಿಕ್ಷೆ ನೀಡಿ ಕಳಿಸಿದ್ದೇವೆ. ಇತನೀಗೆ ಕುಡಿತದ ಚಟವಿದ್ದು ಕುಡಿಯಲು ಹಣವಿಲ್ಲದಾಗ ಮಳಿಗೆಗೆ ಕನ್ನ ಹಾಕಿ ಮಾಲು ಮಾರಾಟ ಮಾಡಿ ಅಂದಿನ ಜೀವನ ಸಾಗಿಸುತ್ತಾನೆ ಎಂದು ವರ್ತಕರೋಬ್ಬರು ಹೇಳಿದ್ದಾರೆ.

Ramesh Babu

Journalist

Recent Posts

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

37 minutes ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

2 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

2 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

12 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

13 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಫಾರ್ಮ್ ಪಾರ್ಟಿ: ಸಂತಸದಿಂದ ಪ್ರಾಣಿಗಳ ಜೊತೆಯಲ್ಲಿ ಸಮಯ ಕಳೆದ ವಿದ್ಯಾರ್ಥಿಗಳು ಮತ್ತು ಪೋಷಕರು

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…

14 hours ago