Categories: ಕೊಡಗು

ಒಣ ಮೀನು ಕದ್ದ ಕಳ್ಳನಿಗೆ ವರ್ತಕರಿಂದ ಧರ್ಮದೇಟು

ಮಾರುಕಟ್ಟೆಯಲ್ಲಿ ನಿರಂತರವಾಗಿ ಕಳ್ಳತನ ‌ಮಾಡುತಿದ್ದ ಚಾಲಕಿ ಕಳ್ಳನನ್ನು ಮಾಲು ಸಮೇತ ವಶಕ್ಕೆ ಪಡೆದು ಧರ್ಮದೇಟು ನೀಡಿದ ಘಟನೆ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.

ವಿರಾಜಪೇಟೆ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಮರ (ತೋರ) ಗ್ರಾಮದ ನಿವಾಸಿಯಾದ ಸುರೇಶ್ (51) ಕಳ್ಳತನ ವೆಸಗಿ ವರ್ತಕರಿಂದ ಧರ್ಮದೇಟು ತಿಂದ ವ್ಯಕ್ತಿ.

*ಘಟನೆಯ ಸಾರ*…..

ಹಲವು ತಿಂಗಳುಗಳಿಂದ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸಿದ್ದವಾಗಿದ್ದ ಮಳಿಗೆ ಮಾಲೀಕರ ತರಕಾರಿ ಚೀಲಗಳು ಮಂಗಮಾಯವಾಗುತಿತ್ತು. ಅವು ಕಳ್ಳತನವಾಗಿದ್ದವು. 15 ದಿನಗಳ ಹಿಂದೆ 50 ಕೆ.ಜಿ. ಬೀಟ್ರೂಟ್ ಚೀಲ, ತಿಂಗಳ ಹಿಂದೆ 20 ಕೆ.ಜಿ.ತೂಕದ ಬೀನ್ಸ್ ಚೀಲ, 10 ದಿನಗಳ ಹಿಂದೆ. 10 ಕೆ.ಜಿ. ತೂಕದ ಹಾಗಲಕಾಯಿ ಚೀಲ ಕಳ್ಳತನವಾಗಿತ್ತು.

ನಿರಂತರ ಕಳ್ಳತನದಿಂದ ಮಾರುಕಟ್ಟೆಯ ವರ್ತಕರು ಕಂಗಾಲಾಗಿದ್ದರು. ತರಕಾರಿ ಮಾರುಕಟ್ಟೆಯ ಒಂದು ಅಂಚಿನಲ್ಲಿ ಒಣ ಮೀನು ಮಾರುಕಟ್ಟೆ ಇದೆ. ಈ ಬಾರಿ ತರಕಾರಿ ಬದಲು ಒಣ ಮೀನಿಗೆ ಕೈ ಹಾಕಿ ಸಿಲುಕಿ ಹಾಕಿಕೊಂಡಿದ್ದಾನೆ.

ಚಾಲಕಿ ಕಳ್ಳ ಸಂತೆಗೆ ಬಂದು ಮೀನು ಕಳ್ಳತನ ಮಾಡಲು ಹೊಂಚು ಹಾಕಿದ್ದಾನೆ. ಯಾರು ಇಲ್ಲದಿರುವುದನ್ನು ಗಮನಿಸಿ ಪ್ಲಾಸ್ಟಿಕ್ ಚೀಲ ಒಂದರಲ್ಲಿ ಬೆಲೆಬಾಳುವ ತೆರೆಂಡಿ ಮೀನುಗಳನ್ನು ಹಾಕಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಮುಂಜಾನೆ ಮಸೀದಿಗೆ ತೆರಳುವ ವ್ಯಕ್ತಿಯೊರ್ವರು ಮಾರುಕಟ್ಟೆಯಿಂದ ಅನಾಮಧೇಯ ವ್ಯಕ್ತಿ ಸಂಶಯಾಸ್ಪದವಾಗಿ ತೆರಳುತಿರುವುದನ್ನು ನೋಡಿದ್ದಾರೆ. ಮಾಹಿತಿ ಸ್ನೇಹಿತರಿಗೆ ತಿಳಿಸಿದ್ದಾರೆ. ವ್ಯಕ್ತಿಯನ್ನು ಹಿಂಬಾಲಿಸಿ ಮೂರ್ನಾಡು ರಸ್ತೆಯ ತಿರುವಿನಲ್ಲಿ ವ್ಯಕ್ತಿಯನ್ನು ಮಾಲು ಸಮೇತವಾಗಿ ಹಿಡಿದಿದ್ದಾರೆ.

ವ್ಯಕ್ತಿಯನ್ನು ಮಾರುಕಟ್ಟೆ ಎಳೆ ತಂದು ವಿಚಾರಣೆ ಮಾಡಿದ್ದಾರೆ. ಏಟು ತಿಂದ ವ್ಯಕ್ತಿ ಸಮೀರ್ ಎಂಬುವವರ ಒಣ ಮೀನು ಮಳಿಗೆಯಿಂದ ತೆರಂಡಿ ಮೀನು ಕಳ್ಳತನ ಮಾಡಿರಯವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.

ತೆರಂಡಿ ಮೀನು ಕೆ.ಜಿ. ಒಂದಕ್ಕೆ 450 ರೂ. ಬೆಲೆಯಾಗಿದ್ದು. ಸುಮಾರು 10 ಕೆ.ಜಿ. ಮೀನು ಕಳ್ಳತನ ಮಾಡಿ ಮಾರಾಟಕ್ಕೆ ತೆರಳುತಿದ್ದ ಎನ್ನಲಾಗಿದೆ.

ಇಂತಹ ಘಟನೆಗಳು ಹಲವು ಬಾರಿ ನಡೆದಿದೆ. ಇದೇ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದಲ್ಲಿ ಗಂಟೆಗಳು ಕಳೆದ ನಂತರ ಮನೆಗೆ ಸೇರುತ್ತಾನೆ. ಆದುದರಿಂದ ನಾವೇ ಅಲ್ಪ ಮಟ್ಟದ ಶಿಕ್ಷೆ ನೀಡಿ ಕಳಿಸಿದ್ದೇವೆ. ಇತನೀಗೆ ಕುಡಿತದ ಚಟವಿದ್ದು ಕುಡಿಯಲು ಹಣವಿಲ್ಲದಾಗ ಮಳಿಗೆಗೆ ಕನ್ನ ಹಾಕಿ ಮಾಲು ಮಾರಾಟ ಮಾಡಿ ಅಂದಿನ ಜೀವನ ಸಾಗಿಸುತ್ತಾನೆ ಎಂದು ವರ್ತಕರೋಬ್ಬರು ಹೇಳಿದ್ದಾರೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago