Categories: ಕೊಡಗು

ಒಣ ಮೀನು ಕದ್ದ ಕಳ್ಳನಿಗೆ ವರ್ತಕರಿಂದ ಧರ್ಮದೇಟು

ಮಾರುಕಟ್ಟೆಯಲ್ಲಿ ನಿರಂತರವಾಗಿ ಕಳ್ಳತನ ‌ಮಾಡುತಿದ್ದ ಚಾಲಕಿ ಕಳ್ಳನನ್ನು ಮಾಲು ಸಮೇತ ವಶಕ್ಕೆ ಪಡೆದು ಧರ್ಮದೇಟು ನೀಡಿದ ಘಟನೆ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.

ವಿರಾಜಪೇಟೆ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಮರ (ತೋರ) ಗ್ರಾಮದ ನಿವಾಸಿಯಾದ ಸುರೇಶ್ (51) ಕಳ್ಳತನ ವೆಸಗಿ ವರ್ತಕರಿಂದ ಧರ್ಮದೇಟು ತಿಂದ ವ್ಯಕ್ತಿ.

*ಘಟನೆಯ ಸಾರ*…..

ಹಲವು ತಿಂಗಳುಗಳಿಂದ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸಿದ್ದವಾಗಿದ್ದ ಮಳಿಗೆ ಮಾಲೀಕರ ತರಕಾರಿ ಚೀಲಗಳು ಮಂಗಮಾಯವಾಗುತಿತ್ತು. ಅವು ಕಳ್ಳತನವಾಗಿದ್ದವು. 15 ದಿನಗಳ ಹಿಂದೆ 50 ಕೆ.ಜಿ. ಬೀಟ್ರೂಟ್ ಚೀಲ, ತಿಂಗಳ ಹಿಂದೆ 20 ಕೆ.ಜಿ.ತೂಕದ ಬೀನ್ಸ್ ಚೀಲ, 10 ದಿನಗಳ ಹಿಂದೆ. 10 ಕೆ.ಜಿ. ತೂಕದ ಹಾಗಲಕಾಯಿ ಚೀಲ ಕಳ್ಳತನವಾಗಿತ್ತು.

ನಿರಂತರ ಕಳ್ಳತನದಿಂದ ಮಾರುಕಟ್ಟೆಯ ವರ್ತಕರು ಕಂಗಾಲಾಗಿದ್ದರು. ತರಕಾರಿ ಮಾರುಕಟ್ಟೆಯ ಒಂದು ಅಂಚಿನಲ್ಲಿ ಒಣ ಮೀನು ಮಾರುಕಟ್ಟೆ ಇದೆ. ಈ ಬಾರಿ ತರಕಾರಿ ಬದಲು ಒಣ ಮೀನಿಗೆ ಕೈ ಹಾಕಿ ಸಿಲುಕಿ ಹಾಕಿಕೊಂಡಿದ್ದಾನೆ.

ಚಾಲಕಿ ಕಳ್ಳ ಸಂತೆಗೆ ಬಂದು ಮೀನು ಕಳ್ಳತನ ಮಾಡಲು ಹೊಂಚು ಹಾಕಿದ್ದಾನೆ. ಯಾರು ಇಲ್ಲದಿರುವುದನ್ನು ಗಮನಿಸಿ ಪ್ಲಾಸ್ಟಿಕ್ ಚೀಲ ಒಂದರಲ್ಲಿ ಬೆಲೆಬಾಳುವ ತೆರೆಂಡಿ ಮೀನುಗಳನ್ನು ಹಾಕಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಮುಂಜಾನೆ ಮಸೀದಿಗೆ ತೆರಳುವ ವ್ಯಕ್ತಿಯೊರ್ವರು ಮಾರುಕಟ್ಟೆಯಿಂದ ಅನಾಮಧೇಯ ವ್ಯಕ್ತಿ ಸಂಶಯಾಸ್ಪದವಾಗಿ ತೆರಳುತಿರುವುದನ್ನು ನೋಡಿದ್ದಾರೆ. ಮಾಹಿತಿ ಸ್ನೇಹಿತರಿಗೆ ತಿಳಿಸಿದ್ದಾರೆ. ವ್ಯಕ್ತಿಯನ್ನು ಹಿಂಬಾಲಿಸಿ ಮೂರ್ನಾಡು ರಸ್ತೆಯ ತಿರುವಿನಲ್ಲಿ ವ್ಯಕ್ತಿಯನ್ನು ಮಾಲು ಸಮೇತವಾಗಿ ಹಿಡಿದಿದ್ದಾರೆ.

ವ್ಯಕ್ತಿಯನ್ನು ಮಾರುಕಟ್ಟೆ ಎಳೆ ತಂದು ವಿಚಾರಣೆ ಮಾಡಿದ್ದಾರೆ. ಏಟು ತಿಂದ ವ್ಯಕ್ತಿ ಸಮೀರ್ ಎಂಬುವವರ ಒಣ ಮೀನು ಮಳಿಗೆಯಿಂದ ತೆರಂಡಿ ಮೀನು ಕಳ್ಳತನ ಮಾಡಿರಯವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.

ತೆರಂಡಿ ಮೀನು ಕೆ.ಜಿ. ಒಂದಕ್ಕೆ 450 ರೂ. ಬೆಲೆಯಾಗಿದ್ದು. ಸುಮಾರು 10 ಕೆ.ಜಿ. ಮೀನು ಕಳ್ಳತನ ಮಾಡಿ ಮಾರಾಟಕ್ಕೆ ತೆರಳುತಿದ್ದ ಎನ್ನಲಾಗಿದೆ.

ಇಂತಹ ಘಟನೆಗಳು ಹಲವು ಬಾರಿ ನಡೆದಿದೆ. ಇದೇ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದಲ್ಲಿ ಗಂಟೆಗಳು ಕಳೆದ ನಂತರ ಮನೆಗೆ ಸೇರುತ್ತಾನೆ. ಆದುದರಿಂದ ನಾವೇ ಅಲ್ಪ ಮಟ್ಟದ ಶಿಕ್ಷೆ ನೀಡಿ ಕಳಿಸಿದ್ದೇವೆ. ಇತನೀಗೆ ಕುಡಿತದ ಚಟವಿದ್ದು ಕುಡಿಯಲು ಹಣವಿಲ್ಲದಾಗ ಮಳಿಗೆಗೆ ಕನ್ನ ಹಾಕಿ ಮಾಲು ಮಾರಾಟ ಮಾಡಿ ಅಂದಿನ ಜೀವನ ಸಾಗಿಸುತ್ತಾನೆ ಎಂದು ವರ್ತಕರೋಬ್ಬರು ಹೇಳಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

11 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

20 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

21 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago