ಮಾರುಕಟ್ಟೆಯಲ್ಲಿ ನಿರಂತರವಾಗಿ ಕಳ್ಳತನ ಮಾಡುತಿದ್ದ ಚಾಲಕಿ ಕಳ್ಳನನ್ನು ಮಾಲು ಸಮೇತ ವಶಕ್ಕೆ ಪಡೆದು ಧರ್ಮದೇಟು ನೀಡಿದ ಘಟನೆ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ನಡೆದಿದೆ.
ವಿರಾಜಪೇಟೆ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಮರ (ತೋರ) ಗ್ರಾಮದ ನಿವಾಸಿಯಾದ ಸುರೇಶ್ (51) ಕಳ್ಳತನ ವೆಸಗಿ ವರ್ತಕರಿಂದ ಧರ್ಮದೇಟು ತಿಂದ ವ್ಯಕ್ತಿ.
*ಘಟನೆಯ ಸಾರ*…..
ಹಲವು ತಿಂಗಳುಗಳಿಂದ ವಿರಾಜಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಸಿದ್ದವಾಗಿದ್ದ ಮಳಿಗೆ ಮಾಲೀಕರ ತರಕಾರಿ ಚೀಲಗಳು ಮಂಗಮಾಯವಾಗುತಿತ್ತು. ಅವು ಕಳ್ಳತನವಾಗಿದ್ದವು. 15 ದಿನಗಳ ಹಿಂದೆ 50 ಕೆ.ಜಿ. ಬೀಟ್ರೂಟ್ ಚೀಲ, ತಿಂಗಳ ಹಿಂದೆ 20 ಕೆ.ಜಿ.ತೂಕದ ಬೀನ್ಸ್ ಚೀಲ, 10 ದಿನಗಳ ಹಿಂದೆ. 10 ಕೆ.ಜಿ. ತೂಕದ ಹಾಗಲಕಾಯಿ ಚೀಲ ಕಳ್ಳತನವಾಗಿತ್ತು.
ನಿರಂತರ ಕಳ್ಳತನದಿಂದ ಮಾರುಕಟ್ಟೆಯ ವರ್ತಕರು ಕಂಗಾಲಾಗಿದ್ದರು. ತರಕಾರಿ ಮಾರುಕಟ್ಟೆಯ ಒಂದು ಅಂಚಿನಲ್ಲಿ ಒಣ ಮೀನು ಮಾರುಕಟ್ಟೆ ಇದೆ. ಈ ಬಾರಿ ತರಕಾರಿ ಬದಲು ಒಣ ಮೀನಿಗೆ ಕೈ ಹಾಕಿ ಸಿಲುಕಿ ಹಾಕಿಕೊಂಡಿದ್ದಾನೆ.
ಚಾಲಕಿ ಕಳ್ಳ ಸಂತೆಗೆ ಬಂದು ಮೀನು ಕಳ್ಳತನ ಮಾಡಲು ಹೊಂಚು ಹಾಕಿದ್ದಾನೆ. ಯಾರು ಇಲ್ಲದಿರುವುದನ್ನು ಗಮನಿಸಿ ಪ್ಲಾಸ್ಟಿಕ್ ಚೀಲ ಒಂದರಲ್ಲಿ ಬೆಲೆಬಾಳುವ ತೆರೆಂಡಿ ಮೀನುಗಳನ್ನು ಹಾಕಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.
ಮುಂಜಾನೆ ಮಸೀದಿಗೆ ತೆರಳುವ ವ್ಯಕ್ತಿಯೊರ್ವರು ಮಾರುಕಟ್ಟೆಯಿಂದ ಅನಾಮಧೇಯ ವ್ಯಕ್ತಿ ಸಂಶಯಾಸ್ಪದವಾಗಿ ತೆರಳುತಿರುವುದನ್ನು ನೋಡಿದ್ದಾರೆ. ಮಾಹಿತಿ ಸ್ನೇಹಿತರಿಗೆ ತಿಳಿಸಿದ್ದಾರೆ. ವ್ಯಕ್ತಿಯನ್ನು ಹಿಂಬಾಲಿಸಿ ಮೂರ್ನಾಡು ರಸ್ತೆಯ ತಿರುವಿನಲ್ಲಿ ವ್ಯಕ್ತಿಯನ್ನು ಮಾಲು ಸಮೇತವಾಗಿ ಹಿಡಿದಿದ್ದಾರೆ.
ವ್ಯಕ್ತಿಯನ್ನು ಮಾರುಕಟ್ಟೆ ಎಳೆ ತಂದು ವಿಚಾರಣೆ ಮಾಡಿದ್ದಾರೆ. ಏಟು ತಿಂದ ವ್ಯಕ್ತಿ ಸಮೀರ್ ಎಂಬುವವರ ಒಣ ಮೀನು ಮಳಿಗೆಯಿಂದ ತೆರಂಡಿ ಮೀನು ಕಳ್ಳತನ ಮಾಡಿರಯವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.
ತೆರಂಡಿ ಮೀನು ಕೆ.ಜಿ. ಒಂದಕ್ಕೆ 450 ರೂ. ಬೆಲೆಯಾಗಿದ್ದು. ಸುಮಾರು 10 ಕೆ.ಜಿ. ಮೀನು ಕಳ್ಳತನ ಮಾಡಿ ಮಾರಾಟಕ್ಕೆ ತೆರಳುತಿದ್ದ ಎನ್ನಲಾಗಿದೆ.
ಇಂತಹ ಘಟನೆಗಳು ಹಲವು ಬಾರಿ ನಡೆದಿದೆ. ಇದೇ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದಲ್ಲಿ ಗಂಟೆಗಳು ಕಳೆದ ನಂತರ ಮನೆಗೆ ಸೇರುತ್ತಾನೆ. ಆದುದರಿಂದ ನಾವೇ ಅಲ್ಪ ಮಟ್ಟದ ಶಿಕ್ಷೆ ನೀಡಿ ಕಳಿಸಿದ್ದೇವೆ. ಇತನೀಗೆ ಕುಡಿತದ ಚಟವಿದ್ದು ಕುಡಿಯಲು ಹಣವಿಲ್ಲದಾಗ ಮಳಿಗೆಗೆ ಕನ್ನ ಹಾಕಿ ಮಾಲು ಮಾರಾಟ ಮಾಡಿ ಅಂದಿನ ಜೀವನ ಸಾಗಿಸುತ್ತಾನೆ ಎಂದು ವರ್ತಕರೋಬ್ಬರು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…