ಒಪನ್‌ ಸರ್ಜರಿಗೆ ನೋ ಹೇಳಿ ರೋಬೋಟಿಕ್‌ ಸರ್ಜರಿ ನಡೆಸಿದ ವೈದ್ಯರು: ಗುಣಮುಖರಾಗಿ ಮನೆಗೆ ತೆರಳಿದ ರೋಗಿ

ವೈಟ್‌ ಫಿಲ್ದ್‌ , ಬೆಂಗಳೂರು: ಕಿಡ್ನಿ ಕ್ಯಾನ್ಸರ್‌ ಗೆ ಅಪರೇಷನ್‌ ಮಾಡಿಸಿದ ಒಂದು ವರ್ಷದ ಬಳಿಕ ಕಾಣಿಸಿಕೊಂಡ ನೋವಿಗೆ ಕಾರಣವೇನೆಂದು ತಿಳಿಯಲು ಸುಮಾರು ಆಸ್ಪತ್ರೆ ಸುತ್ತುತ್ತಾ ಇದ್ದ ವೃದ್ದನಿಗೆ ವೈಟ್‌ ಫೀಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಪರಿಹಾರ ನೀಡಿದೆ .

ಪಶ್ವಿಮ ಬಂಗಾಳ ಮೂಲದ 68 ವರ್ಷ ವಯಸ್ಸಿನ ವೃದ್ದನಿಗೆ ವರ್ಷದ ಹಿಂದೆ ಕಿಡ್ನಿ ಕ್ಯಾನ್ಸರ್‌ ಗೆ ಅಪರೇಷನ್‌ ಮಾಡಲಾಗಿತ್ತು. ಮುಂಬೈಯಲ್ಲಿಅಪರೇಷನ್‌ ನಡೆಸಿ ಒಂದು ವರ್ಷದ ಬಳಿಕ ಮೂತ್ರ ವಿಷರ್ಜನೆ ಮಾಡುವಾಗ ಸಾಕಷ್ಟು ನೋವು ಕಂಡು ಬಂದಿತ್ತು . ಆದ್ರೆ ಅದಕ್ಕೆ ಕಾರಣವೇನು ಎಂದು ತಿಳಿಯಲು ಬಹುತೇಕ ಆಸ್ಪತ್ರೆಗಳಿಗೆ ಸುತ್ತಿದ್ರೂ ನೋವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ . ಬಳಿಕ ಮೆಡಿಕವರ್‌ ಆಸ್ಪತ್ರೆಗೆ ಬಂದು ಇಲ್ಲಿನ ರೋಬೋಟಿಕ್‌ ತಜ್ಞ ಡಾ. ಪ್ರಮೋದ್‌ ರವರನ್ನು ಭೇಟಿ ಮಾಡಿ, ಬಯೋಸ್ಪಿ ಮಾಡಿಸಿದ ಬಳಿಕ ನೋವಿಗೆ ಕಾರಣವೇನು ಎಂದು ತಿಳಿದುಬಂದಿದೆ. ಅಪರೇಷನ್‌ ಮಾಡಿ ಒಂದು ವರ್ಷದ ಬಳಿಕ ಮತ್ತೆ ಯೂರಿನ್‌ ಚೀಲದಲ್ಲಿ ಕ್ಯಾನ್ಸರ್‌ ಇರೋದನ್ನು ಡಾ. ಪ್ರಮೋದ್‌ ವೃದ್ದನಿಗೆ ತಿಳಿಸಿದರು. ಬಳಿಕ ಬೇರೆ ವೈದ್ಯರ ಸಲಹೆ ಪಡೆಯಲು ಮುಂಬೈನ ಹೆಸರಾಂತ ಕ್ಯಾನ್ಸರ್‌ ಆಸ್ಪತ್ರೆಗೆ ತೆರಳಿದರು. ಆದ್ರೆ ಅಲ್ಲಿ ವೃದ್ದನಿಗೆ ಓಪನ್‌ ಸರ್ಜರಿ ನಡೆಸಲು ಸಲಹೆ ನೀಡಿದರು. ಆದ್ರೆ ವೃದ್ದ ಓಪನ್‌ ಸರ್ಜರಿ ಬೇಡ ರೋಬೋಟಿಕ್‌ ಸರ್ಜರಿ ಬೇಕೆಂದು ಮೆಡಿಕವರ್‌ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು .

ಸರ್ಜರಿ ಸ್ವಲ್ಪ ರಿಸ್ಕ್‌ ಇತ್ತು ಯಾಕೆಂದ್ರೆ ಅವರಿಗೆ ಒಂದೇ ಕಿಡ್ನಿ ಇದ್ದಿದ್ದು , ಇನ್ನೊಂದು ಕಿಡ್ನಿಯನ್ನು ಕ್ಯಾನ್ಸರ್‌ ಬಂದ ಕಾರಣ ತೆಗೆಯಲಾಗಿತ್ತು. ಇದ್ದ ಒಂದು ಕಿಡ್ನಿ ಕೂಡ ವೀಕ್‌ ಇತ್ತು . ಸಾಮಾನ್ಯವಾಗಿ ಕಿಡ್ನಿ ಕ್ರಿಯೇಟನೈನ್‌1.3ಇರಬೇಕು . ಆದ್ರೆ ಇವರಿಗೆ ಕಿಡ್ನಿ ಕ್ರಿಯೆಟಿನೈನ್‌ 2.5ಇತ್ತು ಹಾಗೂ ಹಿಮೋಗ್ಲೋಬಿನ್‌ ಕೂಡ ಕಮ್ಮಿ ಇತ್ತು . ಮೊದಲೇ ಅವರಿಗೆ ಪದೇ ಪದೇ ಮೂತ್ರ ವಿಸರ್ಜನೆಯಾಗ್ತಾಯಿದ್ದು, ಸಿಕ್ಕಾಪಟ್ಟೆ ನೋವು ಅನುಭವಿಸಿದ್ದರು . ಹಾಗಾಗೀ ಡಾ . ಪ್ರಮೋದ್‌ ರೋಬೊಟಿಕ್‌ ಸರ್ಜರಿ ಮುಖಾಂತರ ಕ್ಯಾನ್ಸರನ್ನು ಗುಣಮುಖ ಮಾಡಿದರು.

ಕಿಡ್ನಿ ಪೈಪ್‌ ಯನ್ನು ಕರುಳಿನ ಒಂದು ಭಾಗಕ್ಕೆ ಜಾಯಿಂಟ್‌ ಮಾಡಿ , ಕಿಬ್ಬೊಟ್ಟೆಯ ವಾಲ್‌ ಗೆ ಸೇರಿಸಲಾಗಿತ್ತು. ಕರುಳಿನ ಒಂದು ಭಾಗವನ್ನು ತೆಗೆದು ಯೂರಿನ್‌ ಬರೋದಕ್ಕೆ ಕೃತಕ ಮೂತ್ರಕೋಶವನ್ನು ಕ್ರಿಯೆಟ್‌ ಮಾಡಲಾಗಿತ್ತು .
ರೋಬೋಟಿಕ್‌ ಸರ್ಜರಿ ನಡೆಸಿದ್ರೆ ಶಸ್ತ್ರ ಚಿಕಿತ್ಸೆ ವೇಳೆ ರಕ್ತಸ್ರಾವ ಇರೋದಿಲ್ಲ, ಆದ್ರೆ ಓಪನ್‌ ಸರ್ಜರಿ ನಡೆಸಿದ್ರೆ ಸಾಕಷ್ಟು ರಕ್ತಸ್ರಾವ ವಾಗುತ್ತದೆ . ಅಲ್ಲದೇ ರೋಬೊಟಿಕ್‌ ಸರ್ಜರಿ ನಡೆಸಿದ್ರೆ ನಾಲ್ಕೆ ದಿನದಲ್ಲಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ . ಓಪನ್‌ ಸರ್ಜರಿ ನಡೆಸಿದರೆ ರಿಕವರಿ ಟೈಮ್‌ ಕೂಡ ಹೆಚ್ಚು ಇರುತ್ತದೆ . ರೋಬೊಟಿಕ್‌ ಸರ್ಜರಿ ನಡೆಸಿದ ಬಳಿಕ ವೃದ್ದನಲ್ಲಿ ಯಾವುದೇ ರೀತಿಯ ನೋವು ಕಂಡುಬಂದಿಲ್ಲ ಎಂದು ಡಾ. ಪ್ರಮೋದ್‌ ಸಂತಸ ವ್ಯಕ್ತಪಡಿಸಿದ್ದಾರೆ .

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago