ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 hour ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

2 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

9 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago