ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

50 seconds ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

6 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

24 hours ago