ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.
ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.
ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…