ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

22 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago