ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.
ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.
ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.
ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…