ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago