ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

16 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago