ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago