ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

20 hours ago