ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ- ನಟಿ ಅಶಿಕಾ ರಂಗನಾಥ್

ಯಲಹಂಕ : ಒಬ್ಬ ಜನನಾಯಕನಿಗೆ ಇರಬೇಕಾದ ಎಲ್ಲಾ ಕ್ವಾಲಿಟಿ ಮುನೇಗೌಡರಲ್ಲಿದೆ, ಸಿನಿಮಾ ಮತ್ತು ರಾಜಕೀಯದ ನಡುವೆ ಸಂಬಂಧ ಇದೆ, ಸಿನಮಾ ಮಾಡುವುದು ಸಹ ಜನರಿಗಾಗಿ ಹಾಗೆಯೇ ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ ಬೇಕು. ದೇಶವನ್ನ ಅಭಿವೃದ್ಧಿಯಾದ ಕೊಂಡ್ಯೂಯಲು ರಾಜಕೀಯ ಅಗತ್ಯವಿದೆ ಎಂದು ನಟಿ ಅಶಿಕಾ ರಂಗನಾಥ್ ಹೇಳಿದರು.

ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಪ್ರಚಾರ ವೇಳೆ ಮಾತನಾಡಿದ ಅವರು, ಎಂ ಮುನೇಗೌಡರು ಸಿನಿಮಾ ನಿರ್ಮಾಪಕರಾಗಿದ್ದ ಕಾರಣಕ್ಕೆ ಅವರ ಪರಿಚಯ ಇದೆ, ಅವರೊಂದಿಗೆ ಉತ್ತಮ ಬಾಂಧವ್ಯ ಸಹ ಇದೆ, ಯಲಹಂಕ ಕ್ಷೇತ್ರಕ್ಕೆ ಬಂದಾಗ ಮುನೇಗೌಡರನ್ನ ಜನ ಪ್ರೀತಿಸುತ್ತಿರುವ ರೀತಿ ನೋಡಿ ಇದು ತುಂಬಾನೇ ಖುಷಿಯಾಗಿದೆ, ಚುನಾವಣೆಯ ಕಾರಣಕ್ಕೆ ಅವರ ಪರವಾಗಿ ಪ್ರಚಾರಕ್ಕೆ ಬಂದಿರುವುದು ಸಹ ಖುಷಿಗೆ ಕಾರಣವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಎಂ. ಮುನೇಗೌಡ ಮಾತನಾಡಿ ಯಲಹಂಕ ಕ್ಷೇತ್ರಕ್ಕೆ ಉತ್ತಮ ಜನನಾಯಕ ಅಗತ್ಯವಿದೆ. ಇಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಸಲದ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿನ ಅಶೀರ್ವಾದ ಮಾಡುವುದ್ದಾಗಿ ಹೇಳಿದರು.

ಹ್ಯಾಟ್ರಿಕ್ ಜಯ ಸಾಧಿಸಿರುವ ಎಸ್ ಆರ್ ವಿಶ್ವನಾಥ್ ಕ್ಷೇತ್ರ ಯಲಹಂಕ, ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಅವರಿದ್ದಾರೆ, ಆದರೆ ಅವರನ್ನು ಸೋಲಿಸುವ ಸಾಹಸಕ್ಕೆ ಕೈ ಹಾಕಿರೋದು ಜೆಡಿಎಸ್ ಅಭ್ಯರ್ಥಿ ಮುನೇಗೌಡ. ಯಲಹಂಕ ಕ್ಷೇತ್ರದಲ್ಲಿ ಎಂ.ಮುನೇಗೌಡ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಹಾಗೆಯೇ ಜನರ ಬೆಂಬಲ ಸಹ ಇದೆ, ಇಂದು ಅವರ ಪರವಾಗಿ ಪ್ರಚಾರ ಮಾಡಲು ನಾಯಕ ನಟಿ, ಚುಟು ಚುಟು ಸಾಂಗ್ಸ್ ನ ಅಶಿಕಾ ರಂಗನಾಥ್ ಮಾಡಿದ್ರು. ಯಲಹಂಕ ನಗರ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಜನರ ಗಮನ ಸೆಳೆದರು. ಸಿನಿಮಾ ನಟಿಯನ್ನ ಕಣ್ತುಂಬಿ ಕೊಳ್ಳಲು ರಸ್ತೆ ಬದಿಯಲ್ಲಿ ಜನರು ಸೇರಿದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

7 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

9 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

9 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

10 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

14 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

15 hours ago