ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ನಿವೇದಿತಾ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕಳೆಯುವ ಮಧುರ ಕ್ಷಣಗಳು ವಿದ್ಯೆಯೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.
ವಿದ್ಯಾರ್ಥಿಗಳು ಸಮಾಜದಿಂದ ಪಡೆದುಕೊಳ್ಳುವ ಋಣವನ್ನು, ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಹಿಂತಿರುಗಿಸಬೇಕು. ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ನೀತಿಪಾಠವಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶ್ರದ್ಧೆ, ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದರು.
ನಿವೇದಿತಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ರಾಜಣ್ಣ ಮಾತನಾಡಿ, ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ, ಪರಿಶ್ರಮದೊಂದಿಗೆ ಗುರುವಿನ ಉತ್ತಮ ಮಾರ್ಗದರ್ಶನವು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯಾವಂತರು ಯಾವ ಕಾಯಕವಾದರೂ ಸರಿ ಪ್ರಮಾಣಿಕತೆಯಿಂದ ನಿರ್ವಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಧನಲಕ್ಷ್ಮೀ, ಶಿಕ್ಷಕರುಗಳದ ಚೆಲುವರಾಜು, ನಾಗರಾಜ್, ಸೂರ್ಯನಾರಾಯಣ್, ಇಮ್ತಿಯಾಜ್ ಅಹ್ಮದ್, ಸುನಂದಮ್ಮ, ಲಕ್ಷ್ಮೀದೇವಮ್ಮ, ಪ್ರಮೀಳಾ, ಅಶ್ವತ್ಥನಾರಾಯಣ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…