ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ನಿವೇದಿತಾ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕಳೆಯುವ ಮಧುರ ಕ್ಷಣಗಳು ವಿದ್ಯೆಯೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.
ವಿದ್ಯಾರ್ಥಿಗಳು ಸಮಾಜದಿಂದ ಪಡೆದುಕೊಳ್ಳುವ ಋಣವನ್ನು, ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಹಿಂತಿರುಗಿಸಬೇಕು. ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ನೀತಿಪಾಠವಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶ್ರದ್ಧೆ, ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದರು.
ನಿವೇದಿತಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ರಾಜಣ್ಣ ಮಾತನಾಡಿ, ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ, ಪರಿಶ್ರಮದೊಂದಿಗೆ ಗುರುವಿನ ಉತ್ತಮ ಮಾರ್ಗದರ್ಶನವು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯಾವಂತರು ಯಾವ ಕಾಯಕವಾದರೂ ಸರಿ ಪ್ರಮಾಣಿಕತೆಯಿಂದ ನಿರ್ವಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಧನಲಕ್ಷ್ಮೀ, ಶಿಕ್ಷಕರುಗಳದ ಚೆಲುವರಾಜು, ನಾಗರಾಜ್, ಸೂರ್ಯನಾರಾಯಣ್, ಇಮ್ತಿಯಾಜ್ ಅಹ್ಮದ್, ಸುನಂದಮ್ಮ, ಲಕ್ಷ್ಮೀದೇವಮ್ಮ, ಪ್ರಮೀಳಾ, ಅಶ್ವತ್ಥನಾರಾಯಣ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…