ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ನಿವೇದಿತಾ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕಳೆಯುವ ಮಧುರ ಕ್ಷಣಗಳು ವಿದ್ಯೆಯೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.
ವಿದ್ಯಾರ್ಥಿಗಳು ಸಮಾಜದಿಂದ ಪಡೆದುಕೊಳ್ಳುವ ಋಣವನ್ನು, ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಹಿಂತಿರುಗಿಸಬೇಕು. ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ನೀತಿಪಾಠವಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶ್ರದ್ಧೆ, ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದರು.
ನಿವೇದಿತಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ರಾಜಣ್ಣ ಮಾತನಾಡಿ, ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ, ಪರಿಶ್ರಮದೊಂದಿಗೆ ಗುರುವಿನ ಉತ್ತಮ ಮಾರ್ಗದರ್ಶನವು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯಾವಂತರು ಯಾವ ಕಾಯಕವಾದರೂ ಸರಿ ಪ್ರಮಾಣಿಕತೆಯಿಂದ ನಿರ್ವಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಧನಲಕ್ಷ್ಮೀ, ಶಿಕ್ಷಕರುಗಳದ ಚೆಲುವರಾಜು, ನಾಗರಾಜ್, ಸೂರ್ಯನಾರಾಯಣ್, ಇಮ್ತಿಯಾಜ್ ಅಹ್ಮದ್, ಸುನಂದಮ್ಮ, ಲಕ್ಷ್ಮೀದೇವಮ್ಮ, ಪ್ರಮೀಳಾ, ಅಶ್ವತ್ಥನಾರಾಯಣ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…