ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕ-ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಕಸಾಪ ಕೋಶಾಧ್ಯಕ್ಷ ಜಿ.ಸುರೇಶ್

ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ನಗರದ ನಿವೇದಿತಾ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕಳೆಯುವ ಮಧುರ ಕ್ಷಣಗಳು ವಿದ್ಯೆಯೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.

ವಿದ್ಯಾರ್ಥಿಗಳು ಸಮಾಜದಿಂದ ಪಡೆದುಕೊಳ್ಳುವ ಋಣವನ್ನು, ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಹಿಂತಿರುಗಿಸಬೇಕು. ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ನೀತಿಪಾಠವಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶ್ರದ್ಧೆ, ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದರು.

ನಿವೇದಿತಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ರಾಜಣ್ಣ ಮಾತನಾಡಿ, ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ, ಪರಿಶ್ರಮದೊಂದಿಗೆ ಗುರುವಿನ ಉತ್ತಮ ಮಾರ್ಗದರ್ಶನವು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯಾವಂತರು ಯಾವ ಕಾಯಕವಾದರೂ ಸರಿ ಪ್ರಮಾಣಿಕತೆಯಿಂದ ನಿರ್ವಹಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಧನಲಕ್ಷ್ಮೀ, ಶಿಕ್ಷಕರುಗಳದ ಚೆಲುವರಾಜು, ನಾಗರಾಜ್, ಸೂರ್ಯನಾರಾಯಣ್, ಇಮ್ತಿಯಾಜ್ ಅಹ್ಮದ್, ಸುನಂದಮ್ಮ, ಲಕ್ಷ್ಮೀದೇವಮ್ಮ, ಪ್ರಮೀಳಾ, ಅಶ್ವತ್ಥನಾರಾಯಣ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

35 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago