ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕ-ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ಕಸಾಪ ಕೋಶಾಧ್ಯಕ್ಷ ಜಿ.ಸುರೇಶ್

ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ನಗರದ ನಿವೇದಿತಾ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕಳೆಯುವ ಮಧುರ ಕ್ಷಣಗಳು ವಿದ್ಯೆಯೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.

ವಿದ್ಯಾರ್ಥಿಗಳು ಸಮಾಜದಿಂದ ಪಡೆದುಕೊಳ್ಳುವ ಋಣವನ್ನು, ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಹಿಂತಿರುಗಿಸಬೇಕು. ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ನೀತಿಪಾಠವಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶ್ರದ್ಧೆ, ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದರು.

ನಿವೇದಿತಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ರಾಜಣ್ಣ ಮಾತನಾಡಿ, ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ, ಪರಿಶ್ರಮದೊಂದಿಗೆ ಗುರುವಿನ ಉತ್ತಮ ಮಾರ್ಗದರ್ಶನವು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯಾವಂತರು ಯಾವ ಕಾಯಕವಾದರೂ ಸರಿ ಪ್ರಮಾಣಿಕತೆಯಿಂದ ನಿರ್ವಹಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಧನಲಕ್ಷ್ಮೀ, ಶಿಕ್ಷಕರುಗಳದ ಚೆಲುವರಾಜು, ನಾಗರಾಜ್, ಸೂರ್ಯನಾರಾಯಣ್, ಇಮ್ತಿಯಾಜ್ ಅಹ್ಮದ್, ಸುನಂದಮ್ಮ, ಲಕ್ಷ್ಮೀದೇವಮ್ಮ, ಪ್ರಮೀಳಾ, ಅಶ್ವತ್ಥನಾರಾಯಣ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

23 minutes ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

59 minutes ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

16 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago