ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ನಿವೇದಿತಾ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮೀಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಕಳೆಯುವ ಮಧುರ ಕ್ಷಣಗಳು ವಿದ್ಯೆಯೊಂದಿಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.
ವಿದ್ಯಾರ್ಥಿಗಳು ಸಮಾಜದಿಂದ ಪಡೆದುಕೊಳ್ಳುವ ಋಣವನ್ನು, ಸಮಾಜಮುಖಿ ಸೇವಾಕಾರ್ಯಗಳ ಮೂಲಕ ಹಿಂತಿರುಗಿಸಬೇಕು. ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ನೀತಿಪಾಠವಾಗುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶ್ರದ್ಧೆ, ನಿರ್ದಿಷ್ಟ ಗುರಿಯನ್ನು ಹೊಂದಿದ್ದರೆ ಯಶಸ್ಸುಗಳಿಸಲು ಸಾಧ್ಯ ಎಂದರು.
ನಿವೇದಿತಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಜಿ.ರಾಜಣ್ಣ ಮಾತನಾಡಿ, ಮನುಷ್ಯ ಗಳಿಸಿದ ಸಂಪತ್ತು ಶಾಶ್ವತವಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ, ಪರಿಶ್ರಮದೊಂದಿಗೆ ಗುರುವಿನ ಉತ್ತಮ ಮಾರ್ಗದರ್ಶನವು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯಾವಂತರು ಯಾವ ಕಾಯಕವಾದರೂ ಸರಿ ಪ್ರಮಾಣಿಕತೆಯಿಂದ ನಿರ್ವಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಧನಲಕ್ಷ್ಮೀ, ಶಿಕ್ಷಕರುಗಳದ ಚೆಲುವರಾಜು, ನಾಗರಾಜ್, ಸೂರ್ಯನಾರಾಯಣ್, ಇಮ್ತಿಯಾಜ್ ಅಹ್ಮದ್, ಸುನಂದಮ್ಮ, ಲಕ್ಷ್ಮೀದೇವಮ್ಮ, ಪ್ರಮೀಳಾ, ಅಶ್ವತ್ಥನಾರಾಯಣ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…