ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ ಈವರೆಗೂ ನಮ್ಮ ರಾಜ್ಯದಲ್ಲಿ ಯಾವುದೇ ಒಳ ಮೀಸಲಾತಿ ಘೋಷಣೆಯಾಗಿಲ್ಲ. ಆಗಸ್ಟ್ 15ರಂದು  ಕರ್ನಾಟಕ ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡುತ್ತಿದ್ದು, ಒಳ ಮೀಸಲಾತಿ ಜಾರಿ ಮಾಡುವ ಮೂಲಕ  ಮಾದಿಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ದಲಿತ ಮುಖಂಡರಾದ  ಬುಳ್ಳಳ್ಳಿ ರಾಜಣ್ಣ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ನಾಲ್ಕು ತಾಲೂಕುಗಳ ಮಾದಿಗ ಸಮುದಾಯದ ಪ್ರಮುಖರು ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಒಳ ಮೀಸಲಾತಿ ಜಾರಿಗೊಳಿಸುವಂತೆ  ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಒಳ ಮೀಸಲಾತಿ ನೀಡುವ ಭರವಸೆ ನೀಡಿದ್ದ ಸಿದ್ದರಾಮಯ್ಯ ಈಗ ಯಾವುದೇ ನಿರ್ಣಯ ಕೈಗೊಳ್ಳದೆ ಇರುವುದು ಮಾದಿಗ ಸಮುದಾಯ ಕುರಿತು ಅವರ ಬದ್ಧತೆಯನ್ನು ತೋರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲ ದಲಿತಪರ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಮಾದಿಗ ಸಮುದಾಯದ ಎಲ್ಲಾ ಬಂಧುಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ ಎಂದರು.

ಸರ್ಕಾರಕ್ಕೆ ಆಗಸ್ಟ್ 15ರ ಗಡುವು ನೀಡುತ್ತಿದ್ದು ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೊಳಿಸಿ ಸೂಕ್ತ ನ್ಯಾಯ ಕಲ್ಪಿಸದ ಪಕ್ಷದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದು ಅಷ್ಟೇ ಅಲ್ಲದೆ ನಾವು ಪ್ರಾಣತ್ಯಾಗಕ್ಕೂ ಸಿದ್ಧ ಎಂದರು.

ನಮಗೆ ಕಾಂಗ್ರೆಸ್ ಸರ್ಕಾರ ಕೊಡುತ್ತಿರುವ ಯಾವುದೇ ಭಾಗ್ಯಗಳು ಬೇಡ ನಮಗೆ ನಮ್ಮ ಹಕ್ಕು ಒಳ ಮೀಸಲಾತಿ ಕೊಟ್ಟರೆ ಸಾಕು. ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ನಮ್ಮ ಮಾದಿಗ ಸಮುದಾಯ ಹಿಂದುಳಿದಿದ್ದು, ಒಳ ಮೀಸಲಾತಿ ಸಿಗುವ ಮೂಲಕ  ನಮ್ಮ ಜನಾಂಗ ಸಾಕಷ್ಟು ಲಾಭ ಪಡೆಯಲಿದೆ ಸರ್ಕಾರ ಇದನ್ನು ಅರಿಯಬೇಕಿದೆ ನಮ್ಮ ಹಕ್ಕನ್ನು ನಮಗೆ ಕೊಡಿ ನಿಮ್ಮ ಪುಕ್ಕಟ್ಟೆ ಭಾಗ್ಯ ನಮಗೆ ಬೇಡ ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು) ನೇರಳೆಘಟ್ಟ ಮಾತನಾಡಿ, ಈಗಾಗಲೇ ಸಮೀಕ್ಷೆ ಸಂಪೂರ್ಣ ಮುಗಿದಿದೆ. ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ನಮ್ಮ ತಾಳ್ಮೆ ಪರೀಕ್ಷಿಸುತ್ತಿದೆ. ಇಂದು ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಮೂಲಕ ನಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ, ಇಂದಿನ ಪ್ರತಿಭಟನೆ ಕೇವಲ ಸಾಂಕೇತಿಕವಷ್ಟೇ ಸರ್ಕಾರ ಕೂಡಲೇ ನಮ್ಮ ಒಳ ಮೀಸಲಾತಿರ ಘೋಷಣೆ ಮಾಡಲಿ ಇಲ್ಲವಾದಲ್ಲಿ ಆಗಸ್ಟ್  15 ನಂತರ ರಾಜ್ಯಾದ್ಯಂತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ  ನಮ್ಮ ಸಮುದಾಯದ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದರು.

ನಾವು ಕೇಳುತ್ತಿರುವುದು ನಮ್ಮ ಹಕ್ಕು, ಜನಸಂಖ್ಯೆಯಲ್ಲಿ ಹೆಚ್ಚಾಗಿರುವ ನಮ್ಮಗೆ ಒಳ ಮೀಸಲಾತಿ, ಈ ಕೂಡಲೇ ಕಲ್ಪಿಸಬೇಕು. ಇನ್ನಾದರೂ ಮುಖ್ಯಮಂತ್ರಿ ಎಚ್ಚೆತ್ತು ದಲಿತ ಸಮುದಾಯಗಳಿಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಒಳಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದರು.

ವಕೀಲರು ಕರ್ನಾಟಕ ಮಾದರ ಮಹಾಸಭಾ ಸಂಚಾಲಕರಾದ ರಾಜಘಟ್ಟ ಕಾಂತರಾಜು ಮಾತನಾಡಿ, ಇದು ಕೇವಲ ಆರಂಭವಷ್ಟೇ ನಮ್ಮ ಒಳಮೀಸಲಾತಿಯನ್ನು ನಮಗೆ ಕೊಟ್ಟುಬಿಡಿ ಇಂದು ಕೇವಲ ನಾಲ್ಕು ತಾಲೂಕುಗಳ  ಮಾದಿಗ ಸಮುದಾಯದ ಸಾವಿರಾರು ಜನರು  ಪ್ರತಿಭಟನೆಗೆ ಮುಂದಾಗಿದ್ದೇವೆ. ಒಳಮೀಸಲಾತಿ ಜಾರಿಗೊಳಿಸದೆ ಹೋದಲ್ಲಿ ಆಗಸ್ಟ್ 15ರಂದು  ರಾಜ್ಯಾದ್ಯಂತ ಕೋಟ್ಯಾಂತರ ಮಾದಿಗ ಸಮುದಾಯದ ಜನತೆ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆಗೆ ಮುಂದಾಗಲಿದ್ದಾರೆ. ಸರ್ಕಾರವನ್ನು ಅಧಿಕಾರಕ್ಕೆ ತರುವ ಶಕ್ತಿ ಇರುವ ನಮಗೆ ಅದನ್ನು ಕೆಡವಿ ಮತ್ತೊಂದು ಸರ್ಕಾರ ಜಾರಿಗೆ ತರುವ ಶಕ್ತಿ ಕೂಡ ಇದೆ. ಮುಖ್ಯಮಂತ್ರಿಗಳು ಇದನ್ನು ಅರಿತು ಶೀಘ್ರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

1 hour ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

11 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

13 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

16 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

19 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

23 hours ago