ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ ಈವರೆಗೂ ನಮ್ಮ ರಾಜ್ಯದಲ್ಲಿ ಯಾವುದೇ ಒಳ ಮೀಸಲಾತಿ ಘೋಷಣೆಯಾಗಿಲ್ಲ. ಆಗಸ್ಟ್ 15ರಂದು  ಕರ್ನಾಟಕ ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡುತ್ತಿದ್ದು, ಒಳ ಮೀಸಲಾತಿ ಜಾರಿ ಮಾಡುವ ಮೂಲಕ  ಮಾದಿಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ದಲಿತ ಮುಖಂಡರಾದ  ಬುಳ್ಳಳ್ಳಿ ರಾಜಣ್ಣ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ನಾಲ್ಕು ತಾಲೂಕುಗಳ ಮಾದಿಗ ಸಮುದಾಯದ ಪ್ರಮುಖರು ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಒಳ ಮೀಸಲಾತಿ ಜಾರಿಗೊಳಿಸುವಂತೆ  ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಒಳ ಮೀಸಲಾತಿ ನೀಡುವ ಭರವಸೆ ನೀಡಿದ್ದ ಸಿದ್ದರಾಮಯ್ಯ ಈಗ ಯಾವುದೇ ನಿರ್ಣಯ ಕೈಗೊಳ್ಳದೆ ಇರುವುದು ಮಾದಿಗ ಸಮುದಾಯ ಕುರಿತು ಅವರ ಬದ್ಧತೆಯನ್ನು ತೋರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲ ದಲಿತಪರ ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಮಾದಿಗ ಸಮುದಾಯದ ಎಲ್ಲಾ ಬಂಧುಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ ಎಂದರು.

ಸರ್ಕಾರಕ್ಕೆ ಆಗಸ್ಟ್ 15ರ ಗಡುವು ನೀಡುತ್ತಿದ್ದು ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೊಳಿಸಿ ಸೂಕ್ತ ನ್ಯಾಯ ಕಲ್ಪಿಸದ ಪಕ್ಷದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದು ಅಷ್ಟೇ ಅಲ್ಲದೆ ನಾವು ಪ್ರಾಣತ್ಯಾಗಕ್ಕೂ ಸಿದ್ಧ ಎಂದರು.

ನಮಗೆ ಕಾಂಗ್ರೆಸ್ ಸರ್ಕಾರ ಕೊಡುತ್ತಿರುವ ಯಾವುದೇ ಭಾಗ್ಯಗಳು ಬೇಡ ನಮಗೆ ನಮ್ಮ ಹಕ್ಕು ಒಳ ಮೀಸಲಾತಿ ಕೊಟ್ಟರೆ ಸಾಕು. ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ನಮ್ಮ ಮಾದಿಗ ಸಮುದಾಯ ಹಿಂದುಳಿದಿದ್ದು, ಒಳ ಮೀಸಲಾತಿ ಸಿಗುವ ಮೂಲಕ  ನಮ್ಮ ಜನಾಂಗ ಸಾಕಷ್ಟು ಲಾಭ ಪಡೆಯಲಿದೆ ಸರ್ಕಾರ ಇದನ್ನು ಅರಿಯಬೇಕಿದೆ ನಮ್ಮ ಹಕ್ಕನ್ನು ನಮಗೆ ಕೊಡಿ ನಿಮ್ಮ ಪುಕ್ಕಟ್ಟೆ ಭಾಗ್ಯ ನಮಗೆ ಬೇಡ ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು) ನೇರಳೆಘಟ್ಟ ಮಾತನಾಡಿ, ಈಗಾಗಲೇ ಸಮೀಕ್ಷೆ ಸಂಪೂರ್ಣ ಮುಗಿದಿದೆ. ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ನಮ್ಮ ತಾಳ್ಮೆ ಪರೀಕ್ಷಿಸುತ್ತಿದೆ. ಇಂದು ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಮೂಲಕ ನಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ, ಇಂದಿನ ಪ್ರತಿಭಟನೆ ಕೇವಲ ಸಾಂಕೇತಿಕವಷ್ಟೇ ಸರ್ಕಾರ ಕೂಡಲೇ ನಮ್ಮ ಒಳ ಮೀಸಲಾತಿರ ಘೋಷಣೆ ಮಾಡಲಿ ಇಲ್ಲವಾದಲ್ಲಿ ಆಗಸ್ಟ್  15 ನಂತರ ರಾಜ್ಯಾದ್ಯಂತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ  ನಮ್ಮ ಸಮುದಾಯದ ವತಿಯಿಂದ ಉಗ್ರ ಹೋರಾಟ ರೂಪಿಸಲಾಗುವುದು ಎಂದರು.

ನಾವು ಕೇಳುತ್ತಿರುವುದು ನಮ್ಮ ಹಕ್ಕು, ಜನಸಂಖ್ಯೆಯಲ್ಲಿ ಹೆಚ್ಚಾಗಿರುವ ನಮ್ಮಗೆ ಒಳ ಮೀಸಲಾತಿ, ಈ ಕೂಡಲೇ ಕಲ್ಪಿಸಬೇಕು. ಇನ್ನಾದರೂ ಮುಖ್ಯಮಂತ್ರಿ ಎಚ್ಚೆತ್ತು ದಲಿತ ಸಮುದಾಯಗಳಿಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಒಳಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದರು.

ವಕೀಲರು ಕರ್ನಾಟಕ ಮಾದರ ಮಹಾಸಭಾ ಸಂಚಾಲಕರಾದ ರಾಜಘಟ್ಟ ಕಾಂತರಾಜು ಮಾತನಾಡಿ, ಇದು ಕೇವಲ ಆರಂಭವಷ್ಟೇ ನಮ್ಮ ಒಳಮೀಸಲಾತಿಯನ್ನು ನಮಗೆ ಕೊಟ್ಟುಬಿಡಿ ಇಂದು ಕೇವಲ ನಾಲ್ಕು ತಾಲೂಕುಗಳ  ಮಾದಿಗ ಸಮುದಾಯದ ಸಾವಿರಾರು ಜನರು  ಪ್ರತಿಭಟನೆಗೆ ಮುಂದಾಗಿದ್ದೇವೆ. ಒಳಮೀಸಲಾತಿ ಜಾರಿಗೊಳಿಸದೆ ಹೋದಲ್ಲಿ ಆಗಸ್ಟ್ 15ರಂದು  ರಾಜ್ಯಾದ್ಯಂತ ಕೋಟ್ಯಾಂತರ ಮಾದಿಗ ಸಮುದಾಯದ ಜನತೆ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರತಿಭಟನೆಗೆ ಮುಂದಾಗಲಿದ್ದಾರೆ. ಸರ್ಕಾರವನ್ನು ಅಧಿಕಾರಕ್ಕೆ ತರುವ ಶಕ್ತಿ ಇರುವ ನಮಗೆ ಅದನ್ನು ಕೆಡವಿ ಮತ್ತೊಂದು ಸರ್ಕಾರ ಜಾರಿಗೆ ತರುವ ಶಕ್ತಿ ಕೂಡ ಇದೆ. ಮುಖ್ಯಮಂತ್ರಿಗಳು ಇದನ್ನು ಅರಿತು ಶೀಘ್ರ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

24 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago