ಒಳ‌ಮೀಸಲಾತಿಯನ್ನು ವಿರೋಧಿಸುತ್ತೇವೆ- ಭೋವಿ ಸಂಘದ ತಾಲೂಕು ಅಧ್ಯಕ್ಷ ರಾಮಕೃಷ್ಣ

ಹಲವಾರು ಸಮಾಜಿಕ ಕಾರ್ಯಕ್ರಮಗಳ ಜೊತೆಗೆ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನು ಒಗ್ಗೂಡಿಸಿ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ‌ ತಾಲೂಕಿನ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜು ಶ್ಲಾಘಿಸಿದರು.

ನಗರದಲ್ಲಿನ ಭೋವಿ ಸಂಘದ ಕಚೇರಿಯಲ್ಲಿ ನಡೆದ ರಾಮಕೃಷ್ಣ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕಿನ ಎಲ್ಲಾ ಹಳ್ಳಿಗಳು ಭೋವಿ ಸಮುದಾಯದವರನ್ನು ಒಗ್ಗೂಡಿಸಿ ಆರ್ಥಿಕ, ಸಮಾಜಿಕ, ರಾಜಕೀಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸದೃಢರಾಗುವಂತೆ ಮಾಡುತ್ತಿದ್ದಾರೆ ಎಂದರು.

ಈ ವೇಳೆ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ ಸಮುದಾಯದ ಮುಖಂಡರು, ಸ್ನೇಹಿತರು,‌ ಹಿತೈಷಿಗಳಿಗೆ ಧನ್ಯವಾದ ತಿಳಿಸುತ್ತಾ, ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟುವಲ್ಲಿ ಶ್ರಮವಹಿಸುವೆ, ನನ್ನ ಎಲ್ಲಾ ಸಮಾಜಿಕ ಕಳಕಳಿಯ ಸೇವೆಗಳನ್ನು ಮುಂದುವರಿಸುತ್ತೇನೆ. ಸರ್ಕಾರವು ಒಳ‌ಮೀಸಲಾತಿಯನ್ನು ತಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಆದ್ದರಿಂದ ನಾವು ಒಳಮೀಸಲಾತಿಯನ್ನು ವಿರೋಧಿಸುತ್ತೇವೆ‌ ಎಂದರು.

ಈ ವೇಳೆ ಭೋವಿ ಸಂಘದ ಹಿರಿಯ ಮಾಕಳಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

14 minutes ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

2 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

10 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

10 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

13 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

23 hours ago